ವಿನಾಯಕ ಅರಳಸುರಳಿ ಹೊಸ ಅಂಕಣ “ಆಕಾಶ ಕಿಟಕಿ” ಇಂದಿನಿಂದ ಶುರು
ಮೊದಲಿನಿಂದ ಖಾಲಿಯೇ ಇರುವ ಕುರ್ಚಿಗಿಂತ ನಡುವೆ ಒಂದಷ್ಟು ಹೊತ್ತು ಯಾರೋ ಕುಳಿತಿದ್ದು ಎದ್ದು ಹೋದ ಆಸನ ಹೆಚ್ಚು ಖಾಲಿಯಾಗಿ ಕಾಣುತ್ತದೆ. ನವ ಮಾಸ ತುಂಬಿದ ಬಳಿಕ ಜೀವದ ಬದಲಿಗೆ ಶೂನ್ಯವನ್ನು ಹಡೆದ ಒಡಲು ಹೊಸದಾದ ಖಾಲಿತನಕ್ಕೀಡಾಗುತ್ತದೆ. ಬಂದೇ ಬರುವನೆಂದು ನಂಬಿದ್ದ ಅತಿಥಿ.. ಬರಲೇ ಬೇಕಿದ್ದ ಅತಿಥಿ.. ಅವನ ಸ್ವಾಗತಕ್ಕೆ ಏನೆಲ್ಲ ತಯಾರಾಗಿತ್ತು! ತಂದಿಟ್ಟುಕೊಂಡ ಮಲ್ಲಿಗೆ ಮೆದುವಿನ ಟೊಪ್ಪಿಯಿತ್ತು. ಮೊಲದ ತುಪ್ಪಳದಂಥಾ ಅಂಗಿಯಿತ್ತು. ಅದರ ಅಂಚಲ್ಲಿ ಕೈಯಲ್ಲೇ ಹೊಲಿದ ಕಸೂತಿಯಿತ್ತು.
ವಿನಾಯಕ ಅರಳಸುರಳಿ ಹೊಸ ಅಂಕಣ “ಆಕಾಶ ಕಿಟಕಿ” ಇಂದಿನಿಂದ, ಮಂಗಳವಾರಗಳಂದು, ಹದಿನೈದು ದಿಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟವಾಗಲಿದೆ
ಆಸ್ಟ್ರೇಲಿಯಾದ ಆಂಟಿ-ಇಮಿಗ್ರೇಷನ್ ಪ್ರದರ್ಶನ: ಡಾ. ವಿನತೆ ಶರ್ಮ ಅಂಕಣ
ಹೋದ ಭಾನುವಾರ ಆಸ್ಟ್ರೇಲಿಯಾದ ಎಲ್ಲಾ ರಾಜಧಾನಿ ನಗರಗಳಲ್ಲಿ ಮತ್ತು ಕೆಲ ಮುಖ್ಯ ಪಟ್ಟಣಗಳಲ್ಲಿ ನಡೆದ ವಲಸೆ-ವಿರೋಧ ಪ್ರದರ್ಶನ ಅನೇಕ ಪ್ರಶ್ನೆಗಳನ್ನು ಹೊರಹಾಕಿದೆ. ಆಸ್ಟ್ರೇಲಿಯಾಕ್ಕೆ ಬರುವ ವಲಸೆಗಾರರ ಸಂಖ್ಯೆ ಮಿತಿಮೀರಿದೆಯೆ? ಈ ವಲಸೆಗಾರರಿಂದ ಸ್ಥಳೀಯ ಆಸ್ಟ್ರೇಲಿಯನ್ನರಿಗೆ ಕಷ್ಟವಾಗುತ್ತಿದೆಯೆ? ಮಿತಿಮೀರಿದ ವಲಸೆಗಾರರ ಸಂಖ್ಯೆಯಿಂದ ಹೌಸಿಂಗ್, ಉದ್ಯೋಗದ ಅವಕಾಶ, ಆರೋಗ್ಯ ಮುಂತಾದ ವಿಷಯಗಳಲ್ಲಿ ಸಮಸ್ಯೆ ಉಂಟಾಗಿದೆಯೇ? ಈಗಿರುವ ಲೇಬರ್ ಕೇಂದ್ರ ಸರಕಾರ ಉದ್ದೇಶಪೂರ್ವಕವಾಗಿ ವಲಸೆಯನ್ನು ಹೆಚ್ಚಿಸಿದೆಯೇ?
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
ಬದುಕು ಎಂಬ ಶಿಕ್ಷಕ, ಮನುಷ್ಯ ಎಂಬ ವಿದ್ಯಾರ್ಥಿ: ಎಲ್.ಜಿ.ಮೀರಾ ಅಂಕಣ
ಬದುಕಿನ ಅನಿಶ್ಚಿತತೆ, ಮನುಷ್ಯನ ಬದುಕಿನಲ್ಲಿ ವಿಧಿಯು ಆಡುವ ಆಟ, ಎಷ್ಟೇ ಪ್ರಯತ್ನ ಮಾಡಿದರೂ ತನ್ನ ವಿಧಿಯಲ್ಲಿ ಬರೆದ ದುರಂತದಿಂತ ತಪ್ಪಿಸಿಕೊಳ್ಳಲಾಗದ ಮನುಷ್ಯನ ಅಸಹಾಯಕತೆ – ಇವುಗಳನ್ನು ಈ ಮಹಾನ್ ನಾಟಕ ಮನೋಜ್ಞವಾಗಿ ಹೇಳುತ್ತದೆ. ಒಂದು ಸಂದರ್ಭದಲ್ಲಿ `ಅಯ್ಯೋ, ದುರ್ವಿಧಿಯೇ? ನಾಳೆ ಎಂಬುದು ಏನೆಂದು ಗೊತ್ತಿರದ ಮನುಷ್ಯನ ಪಾಡೆ!! ಓಹ್ …. ಅಯ್ಯೋ .., ಸಾಯುವವರೆಗೂ ಯಾರನ್ನೂ ಸುಖಿ ಅನ್ನಬೇಡ’’ ಎಂಬ ಮಾತನ್ನು ನಾಟಕಕಾರ ಸಫೋಕ್ಲಿಸ್ ಒಂದು ಎಚ್ಚರಿಕೆಯೆಂಬಂತೆ, ಒಂದು ಪಾತ್ರದ ಬಾಯಿಂದ ಹೇಳಿಸಿದ್ದಾನೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ
ದೊಡ್ಡ ಜಿಜ್ಞಾಸೆಗಳು, ಸಣ್ಣ ನಿರ್ಧಾರಗಳು: ವಿನತೆ ಶರ್ಮಾ ಅಂಕಣ
ಶುಮಾಶೆರ್ ಹೇಳುವುದೇನೆಂದರೆ, ನಾವು ಮನುಷ್ಯರು ಪ್ರತಿಯೊಬ್ಬ ವ್ಯಕ್ತಿಗೂ ಸುಲಭವಾಗುವಂತೆ ಅವರ ಜೀವನ ಗುಣಮಟ್ಟ ವೃದ್ಧಿಸುವುದಕ್ಕೆ ಅನೂಕೂಲವಾಗುವಂತೆ ತಳಮಟ್ಟದಲ್ಲಿ ಪುಟ್ಟಪುಟ್ಟ ಮತ್ತು ಅನೇಕ ಬಹುತ್ವಗಳನ್ನು ಒಳಗೊಂಡ ತಾಂತ್ರಿಕತೆಗಳನ್ನು, ಕ್ರಮಗಳನ್ನು ಒಗ್ಗಿಸಿಕೊಳ್ಳಬೇಕು. ‘ದೊಡ್ಡದು’ ಅಥವಾ ಹಿರಿದು ಮುಖ್ಯ ಎನ್ನುವ ಆಲೋಚನಾಪರಿಯನ್ನು ಬದಲಿಸಿಕೊಳ್ಳಬೇಕು. ಅಂದರೆ ದೊಡ್ಡಮಟ್ಟದ ಅಭಿವೃದ್ಧಿಗಿಂತಲೂ ಸಣ್ಣ ಮಟ್ಟದ ಸ್ಥಳೀಯ ಅಭಿವೃದ್ಧಿ ಯೋಜನೆಗಳು ಜನರಿಗೆ ಹೆಚ್ಚು ಪ್ರಯೋಜನಕಾರಿ. ಇದೇ ಮಾತನ್ನು ಮಹಾತ್ಮ ಗಾಂಧಿ ಅವರೂ ಹೇಳಿದ್ದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
ಇಂದಿನ ಕನ್ನಡ ಅಧ್ಯಾಪಕರು ಮತ್ತು ಇಂಗ್ಲಿಷ್ ಭಾಷೆ: ಎಲ್.ಜಿ.ಮೀರಾ ಅಂಕಣ
ಬರಬರುತ್ತಾ ಓದು, ವ್ಯುತ್ಪತ್ತಿ, ಭಾಷಾ ಪ್ರೌಢಿಮೆಗಳ ಬಗೆಗಿನ ಆಸ್ಥೆ ಕಡಿಮೆಯಾಗಿ `ಹಾಗೂ ಹೀಗೂ ಒಂದಿಷ್ಟು ಪಾಠ ಮಾಡೋದು, ಸಂತೆ ಹೊತ್ತಿಗೆ ಮೂರು ಮೊಳ ಆದ್ರೆ ಸಾಕು’ ಎಂಬ ಮನಃಸ್ಥಿತಿ ಮೂಡಿತು. ಇದೊಂದು ರೀತಿಯ ಸುಲಭೀಕರಣ. ಇದಕ್ಕೆ ಕನ್ನಡ ಅಧ್ಯಾಪಕರು ಮಾತ್ರ ಕಾರಣ ಅಲ್ಲ. ಜಾಗತೀಕರಣದ ನಂತರ, ಭಾರತ ದೇಶದ ಬದುಕು ಸಾಂಸ್ಕೃತಿಕವಾಗಿ ಹಾಗೂ ಸಾಮಾಜಿಕವಾಗಿ ಬಹಳವಾಗಿ ಬದಲಾಯಿತು. ಉಪಗ್ರಹ ಪ್ರಸಾರದ ಅಂತಾರಾಷ್ಟ್ರೀಯ ಚಲನಚಿತ್ರ ವಾಹಿನಿಗಳು, ಅಂತರ್ಜಾಲ, ಮುಂದೆ ಸರ್ವವ್ಯಾಪಿಯಾದ ಚಲನವಾಣಿಗಳ ಬಳಕೆ ಇವುಗಳಿಂದಾಗಿ ಓದುಸಂಸ್ಕೃತಿ ಹಿಂದೆ ಸರಿದು ನೋಡುಸಂಸ್ಕೃತಿ ಮುನ್ನೆಲೆಗೆ ಬಂದಿತಲ್ಲವೆ?
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ
ಒಂದು ಸಮಸ್ಯೆ, ಸಾಂಘಿಕ ಬಹು-ಉತ್ತರಗಳು: ಡಾ. ವಿನತೆ ಶರ್ಮಾ ಅಂಕಣ
ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮದೇ ಆದ ಬಲವಾದ ಅಸ್ಮಿತೆ ಇಲ್ಲದಿರುವುದು, ಎಲ್ಲಾ ವಿಷಯಗಳಲ್ಲೂ ದೂರದ ಬ್ರಿಟನ್, ಅಮೆರಿಕಾ, ಯುರೋಪ್ ರಾಷ್ಟ್ರಗಳ ನಡೆ-ನುಡಿಗಳನ್ನು ಚಾಚೂತಪ್ಪದೆ ಪಾಲಿಸುತ್ತಾ, ಅವರ ನಿಲುವುಗಳನ್ನೆ ತನ್ನದಾಗಿಸಿಕೊಂಡು ಗುಲಾಮಗಿರಿ ತೋರುವುದು, ತಾವಿರುವ ಏಷ್ಯಾ-ಪೆಸಿಫಿಕ್ ವಲಯದಲ್ಲಿ ತಮ್ಮನ್ನು ಗುರುತಿಸಿಕೊಳ್ಳದೆ ಹೇಡಿತನ ತೋರುವುದು ಕೂಡ ಸಮಸ್ಯೆಯೆ. ಆಸ್ಟ್ರೇಲಿಯಾ ಅಧಿಕೃತವಾಗಿ ಬ್ರಿಟನ್ನಿನ ಅಧಿಪತ್ಯವನ್ನು ಒಪ್ಪಿಕೊಂಡು ಅದರ ಒಂದು ತುಣುಕಾಗಿದ್ದು, ವಸಾಹತುಶಾಹಿ ಬಿಳಿಯರ ದೇಶವಾಗಿದ್ದುಕೊಂಡೆ ಬಾಳುತ್ತಿದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
ಶಾಶ್ವತ ಮತ್ತು ನಶ್ವರ – ಡಿಜಿಟಲ್ ಯುಗದಲ್ಲಿ ಬದಲಾಯಿತೇ ಇವುಗಳ ಅರ್ಥ?: ಎಲ್.ಜಿ. ಮೀರಾ ಅಂಕಣ
ಹುಟ್ಟು ಮತ್ತು ಸಾವು ಎಂಬ ಎರಡು ತುದಿಗಳ ಮಧ್ಯೆ ಕೆಲವು ದಿನ ಆಸೆ-ನಿರಾಸೆ, ಪ್ರೀತಿ-ದ್ವೇಷ, ಭಾವ-ಬುದ್ಧಿ, ಇಷ್ಟ-ಕಷ್ಟ, ಸಂಗ್ರಹ-ಅಸಂಗ್ರಹ, ಸಾಧನೆ-ಸವಾಲು… ಇವೆಲ್ಲವೂ ಸೇರಿದ ಬದುಕಿನ ಬೆಳಕು. ಈ ಬದುಕನ್ನೇ ಮಾಯೆ, ಕತ್ತಲು ಎಂದು ಹೇಳುವ ಒಂದು ಆಧ್ಯಾತ್ಮಿಕ ಚಿಂತನ ಧಾರೆಯೂ ಇದೆಯಲ್ಲವೆ? `ಅಲ್ಲಿದೆ ನಮ್ಮನೆ, ಇಲ್ಲಿ ಬಂದೆ ಸುಮ್ಮನೆ’. `ಯಾಕೆ ಬಡಿದಾಡ್ತಿ ತಮ್ಮ ಮಾಯ ಮೆಚ್ಚಿ ಸಂಸಾರ ನೆಚ್ಚಿ’, `ಒಳಿತು ಮಾಡು ಮನುಜ, ನೀನಿರೋದು ಮೂರು ದಿವಸ’ ಇಂತಹ ಅನೇಕ ಗೀತೆಗಳು, ದಾಸವಾಣಿಗಳು ಬದುಕಿನ ಕ್ಷಣಭಂಗುರತೆಯನ್ನೇ ಹೇಳುತ್ತವೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಇಪ್ಪತ್ತೈದನೆಯ ಬರಹ
ಮಕ್ಕಳ ಶೋಷಣೆಯ ಪಾಪಿಷ್ಟರು: ಡಾ. ವಿನತೆ ಶರ್ಮಾ ಅಂಕಣ
ಹದಿನೆಂಟು ವರ್ಷವಾದಾಗ ಒಬ್ಬ ವ್ಯಕ್ತಿ ‘adult’ ಎಂದು ಸರ್ಕಾರ ಹೇಳುತ್ತದೆ. ಇವರು ತಮ್ಮ ಜೀವನಕ್ಕೆ ತಾವೇ ಸಂಪೂರ್ಣವಾಗಿ ಜವಾಬ್ದಾರರು. ಪೂರ್ಣಾವಧಿ ಉದ್ಯೋಗದಲ್ಲಿದ್ದು ಮುಂದೆ ತಮ್ಮದೇ ಕುಟುಂಬ ಆರಂಭಿಸಿದಾಗ ಇವರ ಮಕ್ಕಳು ಚೈಲ್ಡ್ ಕೇರ್ ಸೆಂಟರ್ಗೆ ಹೋಗುವುದು ಅನಿವಾರ್ಯವಾಗುತ್ತದೆ. ಪಾರ್ಟ್ ಟೈಮ್ ಕೆಲಸ ಮಾಡುತ್ತಾ ಮಕ್ಕಳನ್ನು ಪೋಷಿಸುತ್ತೀವಿ ಎಂದರೆ ಅವರ ಕೆರಿಯರ್ಗೆ ದೊಡ್ಡ ಹೊಡೆತ. ಅಲ್ಲದೆ ಒಂದೂವರೆ ಸಂಬಳವಿದ್ದರೆ ಇತ್ತ ಕಡೆ ಕುಟುಂಬದ ಖರ್ಚುಗಳನ್ನು ತೂಗಿಸಲು ಕಷ್ಟ. ಅತ್ತ ಕಡೆ ಸರಕಾರದಿಂದ welfare ಸಹಾಯ ಸಿಗುವುದಿಲ್ಲ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
ಕಾಡು, ಪುಸ್ತಕ, ಅಭಿಮಾನ ಹಾಗೂ ಅಂತರ್ಜಾಲ ಸಮುದಾಯಗಳ ಆಹ್ಲಾದಕರ ಲೋಕ: ಎಲ್.ಜಿ.ಮೀರಾ ಅಂಕಣ
ಮನುಷ್ಯ ಎಂಬ ಜೀವಿ ಈ ಭೂಮಿಯ ಮೇಲೆ ವಿಕಾಸಗೊಂಡಾಗಿನಿಂದ ಒಂದಲ್ಲ ಒಂದು ರೀತಿಯ ಸಮುದಾಯಗಳನ್ನು ಕಟ್ಟಿಕೊಂಡು ಬದುಕುತ್ತಿದ್ದಾನೆ. ಎಷ್ಟೇ ಜಗಳ, ಭಿನ್ನಾಭಿಪ್ರಾಯ, ಇರಿಸುಮುರಿಸು, ವೈಯಕ್ತಿಕ ಇಚ್ಛೆಗಳ ಬಲ್ಮೆ ಇದ್ದರೂ ನೆರೆಹೊರೆಯೋ, ವೃತ್ತಿ ಸಮುದಾಯವೋ, ಸ್ನೇಹಿತರ ಬಳಗವೋ, ನೆಂಟರಿಷ್ಟರ ಜೊತೆಗಾರಿಕೆಯೋ, ವಠಾರವೋ, ಅನೇಕ ಮನೆಘಟಕಗಳಿರುವ ಸಮುಚ್ಚಯಗಳೋ(ಅಪಾರ್ಟ್ಮೆಂಟ್)… ಒಟ್ಟಿನಲ್ಲಿ ಮನುಷ್ಯರಿಗೆ ಮನುಷ್ಯರ ಸಂಗ-ಸಹವಾಸ ಬೇಕು ಅಷ್ಟೆ. ಇದನ್ನು ಹೆಚ್ಚು ವಿವರಿಸುವ ಅಗತ್ಯ ಇಲ್ಲ ಅನ್ನಿಸುತ್ತೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಇಪ್ಪತ್ನಾಲ್ಕನೆಯ ಬರಹ









