ಆಸ್ಟ್ರೇಲಿಯಾ ಗ್ರೇಟ್ ಎಂದ ಚುನಾವಣೆ ಫಲಿತಾಂಶ: ಡಾ. ವಿನತೆ ಶರ್ಮ ಅಂಕಣ
ಅದೆಷ್ಟೋ ಆಸ್ಟ್ರೇಲಿಯನ್ನರಿಗೆ ಮೇ ಮೂರರ ಶನಿವಾರ ರಾತ್ರಿ ಜಾಗರಣೆ ಆಯ್ತೆಂದು ಕಾಣುತ್ತದೆ. ಚುನಾವಣಾ ಫಲಿತಾಂಶದ ಮುಖ್ಯ ಅಂಶಗಳು ಗೊತ್ತಾಗಿತ್ತು. ಲೇಬರ್ ಪಕ್ಷ ಮುನ್ನಡೆ ಸಾಧಿಸಿತ್ತು. ವಿಜಯೋತ್ಸಾಹದ ಮುಖ ಹೊತ್ತು ಬೀಗುತ್ತಾ ಪ್ರಧಾನಿ ಆಲ್ಬಾನೀಸಿ ಮಾಧ್ಯಮಗಳ ಮುಂದೆ ಎದೆಯುಬ್ಬಿಸಿಕೊಂಡು ನಿಂತು ಆಸ್ಟ್ರೇಲಿಯನ್ನರಿಗೆ ಧನ್ಯವಾದ ಹೇಳಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ
ಹೆಣ್ಣು ಜೀವದ ಎಂದೂ ಮಾಯದ ಗಾಯಗಳು: ಡಾ. ಎಲ್.ಜಿ.ಮೀರಾ ಅಂಕಣ
ನಮ್ಮ ಪಿತೃಪ್ರಧಾನ ವ್ಯವಸ್ಥೆಯು `ಗಂಡನನ್ನು ಹಂಚಿಕೊಳ್ಳಬೇಕಾದ’ ಪರಿಸ್ಥಿತಿಯಲ್ಲಿರುವ ಹೆಣ್ಣಿನ ದುಃಖ ದುಮ್ಮಾನಗಳ ಬಗ್ಗೆ, ಅವಳ `ಅವಮಾನದ’ ಬದುಕಿನ ಬಗ್ಗೆ ಗಂಭೀರವಾಗಿ ಯೋಚಿಸಿಲ್ಲ. ರಾಜಕುಮಾರಿಯರಿಗೆ ಮದುವೆಯಾದಾಗ `ಸವತಿಯರೊಂದಿಗೆ ಜಗಳ ಮಾಡಬೇಡ, ಅವರನ್ನು ಅಕ್ಕ ತಂಗಿಯರಂತೆ ನೋಡಿಕೊ’ ಎಂಬ ಉಪದೇಶವನ್ನು ತವರುಮನೆಯವರು, ಹಿರಿಯರು ಆಕೆಗೆ ನೀಡುತ್ತಿದ್ದರು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹತ್ತೊಂಭತ್ತನೆಯ ಬರಹ
ಹೇಗೆ ಚಿಗುರೊಡೆಯಿತು ಈ ಸ್ನೇಹದ ಬಳ್ಳಿ..: ಎಸ್. ನಾಗಶ್ರೀ ಅಜಯ್ ಅಂಕಣ
ಆಕೆ ಸಿಕ್ಕದಿದ್ದರೂ ಊರು ನಿಧಾನಕ್ಕೆ ಅಮ್ಮನನ್ನು ತನ್ನ ತೆಕ್ಕೆಗೆ ತೆಗೆದುಕೊಂಡು ಪೊರೆಯುತ್ತಿತ್ತು. ಆದರೆ ಜಯಮ್ಮನ ಸ್ನೇಹದ ರುಚಿ ಸಿಗದೆ ನಷ್ಟವಾಗುತ್ತಿತ್ತು. ಯಾವುದೋ ಊರಿನ ಹೆಂಗಸು ಇಲ್ಲಿ ಬಂದಿಳಿದರೆ ನನಗೇನಾಗಬೇಕು? ನೆಂಟರಾ? ಇಷ್ಟರಾ? ಎಂದಾಕೆ ದೂರವುಳಿಯಬಹುದಿತ್ತು. ಹೊಸ ಊರಿನಲ್ಲಿ ಮನೆತನಕ ಬಂದು ಮಾತನಾಡುತ್ತಾ ಕೂರುವ ಈ ಹೆಂಗಸಿಗೆ ನನ್ನಿಂದ ಏನಾದರೂ ಸಹಾಯದ ನಿರೀಕ್ಷೆಯಿದೆಯೆ? ನಂಬಿಸಿ ಮೋಸ ಮಾಡಿದರೇನು ಗತಿ? ಎಳೆಮಗುವನ್ನು ಇವಳ ಕೈಗಿತ್ತು ಹೇಗೆ ಹೋಗಲಿ? ಎಂದೆಲ್ಲ ಅನುಮಾನಿಸಿ ಅಮ್ಮನೂ ಚಿಪ್ಪಿನೊಳಗೆ ಸೇರಬಹುದಿತ್ತು.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ ಬರಹ
ನಾಯಕತ್ವದ ನಿರ್ಣಾಯಕ ದಿನವಿಂದು: ಡಾ. ವಿನತೆ ಶರ್ಮ ಅಂಕಣ
ಇಂಡಿಪೆಂಡೆಂಟ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಲೀ ಸ್ಮಿತ್ ಹೇಳಿದ್ದು ‘ನಮ್ಮ ಜೀವನ ಗುಣಮಟ್ಟ ನಿರ್ಧಾರವನ್ನು ವಾಪಸ್ ಪಡೆಯೋಣ, ಅದು ನಮ್ಮ ಹಕ್ಕು’ ಎಂದು. ಪರಿಸರವಿಜ್ಞಾನಿಯಾಗಿ ಕೆಲಸ ಮಾಡುತ್ತಿರುವ ಈಕೆ ಜನಸಮುದಾಯದಲ್ಲಿ ಬೆರೆತು ಜನಾಭಿಪ್ರಾಯವನ್ನು ಅರಿತು ಸಮುದಾಯ ಅವಶ್ಯಕತೆಗಳಿಗೆ ಪ್ರಾಧಾನ್ಯತೆ ಕೊಟ್ಟಿದ್ದಾರೆ. ಪ್ರತಿದಿನ ಆಹಾರ ಪದಾರ್ಥಗಳ ಬೆಲೆ ಕಡಿಮೆ ಮಾಡುವುದು, ಸಣ್ಣಪುಟ್ಟ ವ್ಯಾಪಾರ ಸಂಸ್ಥೆಗಳಿಗೆ ಪ್ರೋತ್ಸಾಹ, ವಸತಿ ವೆಚ್ಚದಲ್ಲಿ ರಿಯಾಯ್ತಿ, ರಸ್ತೆಗಳನ್ನು ಉತ್ತಮ ಪಡಿಸುವುದು, ಇತ್ಯಾದಿ ಈಕೆಯ ಗುರಿಗಳು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ
ಆಧಿಕ್ಯದ ಸಮಸ್ಯೆ…: ಡಾ. ಎಲ್.ಜಿ.ಮೀರಾ ಅಂಕಣ
ಪುರಂದರ ದಾಸರ ಸಾಲುಗಳು ನೆನಪಾಗುತ್ತವೆ – “ಇಷ್ಟು ದೊರಕಿದರೆ ಅಷ್ಟು ಬೇಕೆಂಬಾಸೆ, ಅಷ್ಟು ದೊರಕಿದರೆ ಮತ್ತಿಷ್ಟರಾಸೆ, ಕಷ್ಟ ಬೇಡೆಂಬಾಸೆ ಕಡುಸುಖವ ಕಾಂಬಾಸೆ, ನಷ್ಟ ಜೀವನದಾಸೆ ಪುರಂದರ ವಿಠಲ”. ಮನುಷ್ಯನಿಗೆ ಸಾಕು ಎನ್ನುವುದು ಎಷ್ಟು ಕಷ್ಟ ಎಂಬ ವಿಷಯವು ನಮಗೆ ಇದರಿಂದ ಗೊತ್ತಾಗುತ್ತದೆ ಅಲ್ಲವೆ? ಎಷ್ಟಿದ್ದರೂ ನಮಗೆ ಇನ್ನೂ ಬೇಕು ಬೇಕು ಬೇಕು ಬೇಕು. ಒಬ್ಬೊಬ್ಬರು ಹೊಂದಿರುವ ಸಾವಿರ ಸೀರೆಗಳು, ಮುನ್ನೂರು ಚಪ್ಪಲಿಗಳು, ಚಿನ್ನದ ಶೌಚಾಲಯ ಘಟಕಗಳು, ನಲವತ್ತೆಂಟು ಕೈಗಡಿಯಾರಗಳು ….
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹದಿನೆಂಟನೆಯ ಬರಹ
ಶರತ್ಕಾಲದ ರಂಗುರಂಗಿನ ಪ್ರಚಾರ: ಡಾ. ವಿನತೆ ಶರ್ಮ ಅಂಕಣ
ಕಾನೂನಿನ ಪ್ರಕಾರ ಗೋಡೆ ಗ್ರಫಿಟಿ ಆರ್ಟ್, ಮಸಿ ಬಳೆಯುವುದು ಇಂಥವುದೆಲ್ಲಾ ಅಪರಾಧಗಳು. ಬಲವಾದ, ಅದರಲ್ಲೂ ಕೇಂದ್ರೀಯ ವಿರೋಧಪಕ್ಷದ ನಾಯಕರಾದ ಪೀಟರ್ ಡಟ್ಟನ್ ಅವರ ಭಿತ್ತಿಚಿತ್ರಕ್ಕೆ ಮಸಿ ಬಳೆದದ್ದನ್ನ ನೋಡಿ ನನಗೆ ಆಶ್ಚರ್ಯವಾಯ್ತು. ಅದ್ಯಾರೊ ಬಹಳ ಧೈರ್ಯವಂತರಿರಬೇಕು ಎಂದುಕೊಂಡೆ. ಇಲ್ಲವೇ, ಡಟ್ಟನ್ ಅವರ ಸ್ವಲ್ಪವೂ ಸತ್ವವಿಲ್ಲದ, ಅಸತ್ಯದ, ಅಸಂಗತ ಮಾತುಗಳು, ಹೇಳಿಕೆಗಳಿಂದ ಬೇಸತ್ತು ಅವರ ಭಿತ್ತಿಚಿತ್ರದ ಮುಖಕ್ಕೆ ಮಸಿಬಳೆಯುವ ಯೋಚನೆ ಬಂದಿರಬೇಕು. ಅವರ ಬಳಿ ಸತ್ವಯುತ, ಅಭಿವೃದ್ಧಿ-ಪರ, ಜನ-ಪರ ಆಶ್ವಾಸನೆಗಳು ಇಲ್ಲದಿರುವುದು ಮಸಿಬಳೆದ ಕಿಡಿಗೇಡಿಗಳಿಗೆ ಅದೆಷ್ಟು ನಿರಾಸೆ ತಂದಿರಬೇಕು ಎಂದೆನಿಸಿತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
ಮಕ್ಕಳನ್ನು ಬೆಳೆಸುವ `ಕಲೆ’- ಎಂದಾದರೂ ಸಿದ್ಧಿಸೀತೇ?: ಎಲ್.ಜಿ.ಮೀರಾ ಅಂಕಣ
ಬೆಳಿಗ್ಗೆ ಏಳುವ ಸಮಯದಿಂದ ಹಿಡಿದು ರಾತ್ರಿ ಮಲಗುವ ಸಮಯದ ತನಕ ಪ್ರತಿಯೊಂದೂ ಅಂದರೆ ಇಂಚಿಂಚು ಜೀವನವೂ ನಿರ್ಬಂಧಮಯವಾದ ಜೀವನಶೈಲಿ ಇರುವ ಸನ್ನಿವೇಶ ಇದು. ಮಕ್ಕಳನ್ನು ಅದರಲ್ಲೂ ವಿಜ್ಞಾನ ಶಿಕ್ಷಣ ಆರಿಸಿಕೊಂಡವರಿಗೆ ಜಂಗಮವಾಣಿಯನ್ನು ಮುಟ್ಟಲೂ ಬಿಡದ, ಯಾವುದೇ ಸಾಂಸ್ಕೃತಿಕ ಚಟುವಟಿಕೆಗಳಿಗೆ ತೊಡಗಿಸದ ಮನೆಗಳಿವೆ, ವಿದ್ಯಾರ್ಥಿನಿಲಯಗಳಿವೆ! ಈ ವ್ಯವಸ್ಥೆಗೆ ಕೆಲವು ಮಕ್ಕಳು ಹೇಗೋ ಹೊಂದಿಕೊಂಡರೆ ಇನ್ನು ಕೆಲವರು ಆ `ಸೆರೆಮನೆ’ಯಿಂದ ಓಡಿ ಹೋಗಿಬಿಡುವುದು, ಅಥವಾ ದಿಕ್ಕು ಕಾಣದೆ ಆತ್ಮಹತ್ಯೆ ಮಾಡಿಕೊಳ್ಳುವುದು ಇಂತಹ ಅತಿರೇಕದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹದಿನೇಳನೆಯ ಬರಹ
ಬದುಕಿನ ಪಯಣದಲ್ಲಿ ತಂಗುದಾಣಗಳೂ ಇರಲಿ: ಎಸ್. ನಾಗಶ್ರೀ ಅಜಯ್ ಅಂಕಣ
ನಮಗೇನು ಬೇಕು? ಒಂದು ಒಳ್ಳೆಯ ಬಿಡುವು, ನಮ್ಮದೆನ್ನುವ ಸ್ವಲ್ಪ ಸಮಯ, ಜೀವನಕ್ಕೊಂದು ಗುರಿ, ಹತ್ತಿರದವರ ಮೆಚ್ಚುಗೆ ಮತ್ತು ಅಹಂಕಾರಕ್ಕಿಂತ ವಿನಮ್ರತೆಯಲ್ಲಿ ಸುಖ ಕಾಣುವ ಮನಃಸ್ಥಿತಿ. ಪ್ರತಿದಿನವೂ ಅರ್ಧಗಂಟೆಯಾದರೂ ವ್ಯಾಯಾಮ, ನಡಿಗೆ, ಯೋಗ ಇತ್ಯಾದಿಗೆ ಸಮಯ ಮೀಸಲಿಡುವುದು, ಮರೆತುಹೋದ ಹವ್ಯಾಸಗಳೊಂದಿಗೆ ಮತ್ತೆ ಸಖ್ಯ ಬೆಳೆಸುವುದು, ಹೊಸತನ್ನು ಕಲಿಯುವುದು, ಉದ್ಯೋಗ ಮತ್ತು ವೈಯಕ್ತಿಕ ಬದುಕಿನ ನಡುವೆ ಅಂತರ ಕಾಯ್ದುಕೊಳ್ಳುವುದು ಹಾಗೂ ನಮ್ಮ ಇಂದಿನ ಬದುಕು ಹಲವರ ಕನಸೆಂಬುದನ್ನು ಮನಗಾಣುವುದು ಸಹಾಯ ಮಾಡಬಹುದು.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ ಬರಹ ನಿಮ್ಮ ಓದಿಗೆ
ಚುನಾವಣಾ ಕಣಕ್ಕೆ ಪ್ರವೇಶ: ಡಾ. ವಿನತೆ ಶರ್ಮ ಅಂಕಣ
ಈ ಬಾರಿ ಈ ಡಟ್ಟನ್ ಮಹಾಶಯ ವಲಸಿಗರ ಮನ ಓಲೈಸುವ ಪ್ರಯತ್ನಕ್ಕೆ ಇಳಿದಿದ್ದಾರೆ. ಪ್ರತಿದಿನವೂ ಆಸ್ಟ್ರೇಲಿಯನ್ ನಗರಗಳ ಹೊರವಲಯಗಳಲ್ಲಿ ವಾಸಿಸುತ್ತಿರುವ ವಲಸಿಗ ಸಮುದಾಯಗಳಿಗೆ ಭೇಟಿಕೊಟ್ಟು, ಭರವಸೆಗಳನ್ನು ಕೊಡುತ್ತಿದ್ದಾರೆ. ತಾವು ವಲಸಿಗರ ‘ಆಸ್ಟ್ರೇಲಿಯನ್ ಕನಸು’ ಎಂಬುದಕ್ಕೆ ಬೆಂಬಲ ಕೊಟ್ಟು, ವಲಸಿಗರ ಜೀವನವನ್ನು ಹಸನು ಮಾಡುವ ಮಾತನ್ನು ಆಡುತ್ತಿದ್ದಾರೆ. ವಲಸಿಗರೂ ಅಷ್ಟೇ, ಬಹಳ ಆಸಕ್ತಿಯಿಂದ ಚುನಾವಣಾ ವಿಷಯಗಳಲ್ಲಿ ಭಾಗವಹಿಸುತ್ತಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”









