Advertisement

ಕೆಂಡಸಂಪಿಗೆ

ಗಣಿತ ಟ್ಯೂಷನ್ನಿನ ಹಾಸ್ಯ ಪ್ರಸಂಗಗಳು… ಬಸವನಗೌಡ ಹೆಬ್ಬಳಗೆರೆ ಸರಣಿ

ಸುಧಾಕರನ ಅಣ್ಣನ ದಿನಚರಿಯೇ ವಿಶೇಷ ಎನಿಸುತ್ತಿತ್ತು. ಅವರು ಮಿತ ಭಾಷಿ, ಏಕಾಂಗಿಯಾಗಿರ್ತಾ ಇದ್ರು. ರಾತ್ರಿ 10 ಕ್ಕೆ ಓದಲು ಕುಳಿತರೆ ಬೆಳಗಿನ ಜಾವ 5 ಗಂಟೆಯವರೆಗೂ ಓದೋದು. ಮತ್ತೆ 5 ಕ್ಕೆ ಮಲಗಿ 10 ಗಂಟೆಗೆ ಎದ್ದು ಕಾಲೇಜಿಗೆ ಹೋಗೋರು. ಇದೇ ರೀತಿಯಾಗಿ ನಮ್ಮ ಹಾಸ್ಟೆಲ್ಲಿನ ಎಂಜಿನಿಯರಿಂಗ್ ಹುಡುಗರು ಓದ್ತಾ ಇದ್ರು. ಈ ರೀತಿ ರಾತ್ರಿಯಿಡೀ ಓದೋಕೆ ‘ನೈಟ್ ಔಟ್ ಮಾಡೋದು’ ಎಂಬ ಪದ ಬಳಸ್ತಾ ಇದ್ರು. ಹಾಸ್ಟೆಲ್ಲಿನ ಮಧ್ಯಭಾಗದಲ್ಲಿದ್ದ ಫೀಲ್ಡಿನಲ್ಲಿ ಸ್ಟಡಿ ಚೇರ್ ಹಾಕ್ಕೊಂಡು ಕುಳಿತು ಓದೋಕೆ ಶುರು ಮಾಡ್ತಿದ್ರು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಉದರನಿಮಿತ್ಥಂ ಸುಳ್ಳಿನ ವೇಷಂ!!: ಬಸವನಗೌಡ ಹೆಬ್ಬಳಗೆರೆ ಸರಣಿ

ಆತನಕ ಎಲ್ಲಾ ಅಂದುಕೊಂಡಂತೆಯೇ ನಡೆದು ಇನ್ನೇನು ಛತ್ರದೊಳಗೆ ಎರಡು ಹೆಜ್ಜೆ ಹೋಗಿಲ್ಲ, ಅಷ್ಟರೊಳಗೆ ಪ್ರೌಢಶಾಲಾ ಗೆಳೆಯ, ನನ್ನ ಜ್ಯೂನಿಯರ್ ಒಬ್ಬ ಸಿಕ್ಕ. ನನ್ನ ಮುಖಪರಿಚಯ ಚೆನ್ನಾಗಿಯೇ ಇದ್ದ ಮಂಜುನಾಥನೇ ಅವನು! ನಾನು ಅವನ ಮುಖ ಕಂಡೊಡನೆಯೇ ತಬ್ಬಿಬ್ಬಾಗಿ, ನನ್ನ ಪರಿಚಿತರ ಮದುವೆಗೆ ಬಂದಿದ್ದೇನೆ ಎಂದು ಅವನ ಎದುರು ತೋರ್ಪಡಿಸಿಕೊಳ್ಳಲು, ಅವನು ಮಾತಾಡುವ ಮುನ್ನವೇ ‘ಏನ್ ಮಂಜು ಇಲ್ಲಿ?’ ಎಂದು ಪ್ರಶ್ನಿಸಿದೆ. ಅದಕ್ಕವನು ಅತ್ಯಾಶ್ಚರ್ಯ ಮುಖ ಭಾವದಿಂದ ‘ಅಣ್ಣಾ, ಇಲ್ಲಿ ನಡೆಯುತ್ತಿರುವುದು ನನ್ನ ಸ್ವಂತ ಅಕ್ಕನ ಮದುವೆ’ ಎಂದ! ಈಗ ತಬ್ಬಿಬ್ಬಾಗುವ ಸರದಿ ನನ್ನದಾಗಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಇಪ್ಪತ್ತೇಳನೆಯ ಕಂತು ನಿಮ್ಮ ಓದಿಗೆ

Read More

ಓದೋ ಜರ್ನಿಯಲಿ ಅಡ್ಡಿಯಾದ ಸಮಸ್ಯೆಗಳ ‘ಹಂಪ್ಸ್’ಗಳು!!: ಬಸವನಗೌಡ ಹೆಬ್ಬಳಗೆರೆ ಸರಣಿ

ಪಿಯುಸಿಯಲ್ಲಿ ಇದ್ದ 24 ವಿದ್ಯಾರ್ಥಿಗಳು ಅಷ್ಟೇನೂ ಸೀರಿಯಸ್ಸಾಗಿ ಓದುತ್ತಿರಲಿಲ್ಲ. ಇವರೊಡನೆ ನಾನು ಸೇರಿದ ಕಾರಣ ಹೇಸಿಗೆ ತಿನ್ನೋ ಎಮ್ಮೆ ಜೊತೆ ಆಕಳು ಸೇರಿ ಆಕಳೂ ಸಹ ಹೇಸಿಗೆ ತಿನ್ನೋದನ್ನ ಕಲೀತಂತೆ ಅನ್ನೋ ಹಾಗೆ ನಾನೂ ಸಹ ಓದುವುದನ್ನು ಕಮ್ಮಿ ಮಾಡಿದೆ. ನಾನು ತುಂಬಾ ಕ್ಲೋಸ್ ಆಗಿದ್ದು ಲಿಂಗರಾಜ ಹಾಗೂ ಸುಧಾಕರ ಜೊತೆ. ಲಿಂಗರಾಜ ನಮ್ಮದೇ ಕಾಲೇಜು ಆದರೆ ಸುಧಾಕರ ಮಾತ್ರ ಡಿಆರ್ ಎಂ ಕಾಲೇಜು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಇಪ್ಪತ್ತಾರನೆಯ ಕಂತು ನಿಮ್ಮ ಓದಿಗೆ

Read More

ಪಿಯುಸಿಯ ಕಡುಕಷ್ಟದ ಆ ದಿನಗಳು….: ಬಸವನಗೌಡ ಹೆಬ್ಬಳಗೆರೆ ಸರಣಿ

ನನ್ನ ರೂಮಿನಲ್ಲಿ ಬೇರೆ ಬೇರೆ ಕಾಲೇಜಿನ ಹುಡುಗರು ಇದ್ದರು. ನಾವು ಮಧ್ಯಾಹ್ನ ಹಸಿವನ್ನು ನೀಗಿಸಿಕೊಳ್ಳಲು ಸಾಮಾನ್ಯವಾಗಿ ಕ್ರೀಂ ಬನ್ ತಿನ್ನುತ್ತಿದ್ದೆವಾದರೂ ಕೆಲವೊಮ್ಮೆ ಸುಖ ಸಾಗರ ಹೋಟೆಲ್ಲಿಗೆ ಇಡ್ಲಿ ತಿನ್ನೋಕೆ ಹೋಗ್ತಿದ್ವಿ. ಇಲ್ಲಿನ ಸಾಂಬಾರ್ ತುಂಬಾ ಚೆನ್ನಾಗಿರೋದು. ನಮಗೆ ಜಾಸ್ತಿ ಇಡ್ಲಿ ತಿನ್ನೋಕೆ ದುಡ್ಡು ಇಲ್ಲದೇ ಇರುತ್ತಿದ್ದರಿಂದ ಎರಡೇ ಇಡ್ಲಿ ತಿನ್ತಾ ಇದ್ದೆವು. ಆದರೆ ಸಾಂಬಾರನ್ನು ನಾವೇ ಹಾಕಿಕೊಳ್ಳುವ ವ್ಯವಸ್ಥೆ ಅಲ್ಲಿದ್ದುದ್ದರಿಂದ ಇಡ್ಲಿಗಿಂತ ಸಾಂಬಾರನ್ನೇ ನಾವು ಹೆಚ್ಚು ಬಡಿಸಿಕೊಂಡು ತಿನ್ನುತ್ತಿದ್ದೆವು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಮಕ್ಕಳನ್ನು ಮಕ್ಕಳಂತಿರಲು ಬಿಡಿ ಪಾಪ!: ಬಸವನಗೌಡ ಹೆಬ್ಬಳಗೆರೆ ಸರಣಿ

ನಾನು ತುಂಬಾ ಸ್ವಾಭಿಮಾನಿಯಾದ್ದರಿಂದ ನನ್ ಮಾಮ ‘ಖರ್ಚಿಗೆಂದು ದುಡ್ಡು ಕೇಳಲು ನಾಚಿಕೆಪಟ್ಟುಕೊಳ್ಳಬೇಡ’ ಎಂದರೂ ನಾನು ಮಾತ್ರ ಹಾಗೆ ಕೇಳುತ್ತಿರಲಿಲ್ಲ. ಮನೆಯವರಿಂದಲೂ ಅಷ್ಟೇನೂ ಆರ್ಥಿಕ ಸಹಕಾರ ಇರಲಿಲ್ಲ. ಮೊದಲೇ ಬೆಂಗಳೂರಿಗೆ ಹೊಸಬ. ಮೊದಲು ಒಂದೆರಡು ದಿನ ನನ್ನ ಮಾಮನೇ ನನ್ನನ್ನು ಕಾಲೇಜಿಗೆ ಡ್ರಾಪ್ ಕೊಟ್ಟ. ಮೂರನೇ ದಿನದಿಂದ ನನಗೇ ಬರಲು ತಿಳಿಸಿದ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಇಪ್ಪತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ