Advertisement

ಕೆಂಡಸಂಪಿಗೆ

ಡಾ. ಚಂದ್ರಮತಿ ಸೋಂದಾ ಬರೆಯುವ ಸರಣಿ “ಮಾತು ಮಂದಲಿಗೆ” ಆರಂಭ

ಅದೃಷ್ಟದ ಪೆನ್ನು ಎಂದು ತಮ್ಮ ಪೆನ್ನಿನ ಬಗ್ಗೆ ಬಹಳ ಮುತುವರ್ಜಿವಹಿಸುವುದೂ ಇದೆ. ಅದೇನಾದರೂ ಕಳೆದುಹೋಯಿತು ಅಂದ್ರೆ ಆಗ ನೋಡಬೇಕು ಭೂಮಿ ಆಕಾಶ ಒಂದು ಮಾಡುವ ಥರಾ ಕೂಗಾಡುವುದನ್ನು. ಸಿಗಲಿಲ್ಲ ಅಂದರೆ ಮನೆಮಂದಿಗೆಲ್ಲ ಮಂತ್ರಾಕ್ಷತೆ ಬೇರೆ. ಅವರ ಅವತಾರ ನೋಡಿದ್ರೆ ಏನೋ ಆಗಬಾರದ್ದು ಆಗಿದೆ ಅನ್ನುವ ರೀತಿ ನಡವಳಿಕೆ. ಪೆನ್ನು ಕೈಗೆ ಬಂತು ಅಂದರೆ ಎಲ್ಲವೂ ತಣ್ಣಗೆ. ಕೆಲವರ ಸಹಿಯನ್ನಂತೂ ಯಾರಿಗೂ ನಕಲು ಮಾಡಲು ಆಗದಂತಹುದು.
ಡಾ. ಚಂದ್ರಮತಿ ಸೋಂದಾ ಬರೆಯುವ ಹಳೆ ಕಾಲದ ನೆನಪುಗಳ ಸರಣಿ “ಮಾತು ಮಂದಲಿಗೆ” ಇಂದಿನಿಂದ ಮೂರುವಾರಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಎಮ್ಮೆಎಮ್ಮೆಯೆಂದೇಕೆ ಬೀಳುಗಳೆವಿರಿ?

ಕೆಲವು ಎಮ್ಮೆಗಳು ಬಹಳ ಸೂಕ್ಷ್ಮ. ಎಮ್ಮೆ ಕರುಹಾಕಿ ನಂತರದಲ್ಲಿ ಒಬ್ಬರೇ ಹಾಲು ಕರೆಯುತ್ತಿದ್ದರೆ ಅದು ಕೆಲವು ದಿನಗಳ ನಂತರ ಇನ್ನೊಬ್ಬರಿಗೆ ಹಾಲನ್ನು ಕೊಡುವುದಿಲ್ಲ. ಸೊರವು ಬಿಡದೆ ಸುಮ್ಮನೆ ನಿಂತಿರುತ್ತದೆ. ಮೊಲೆಗಳನ್ನು ಎಷ್ಟೇ ಜಗ್ಗಿದರೂ ಮೊಲೆಗೆ ಹಾಲು ಇಳಿಸುವುದೇ ಇಲ್ಲ. ಇದನ್ನು ನಮ್ಮೂರಕಡೆ ಕೈಮರ್ಚಲು ಎನ್ನುತ್ತಾರೆ. ಇನ್ನೊಬ್ಬರು ಹಾಲು ಕರೆಯಬೇಕೆಂದರೆ ಸಾಕಷ್ಟು ಸರ್ಕಸ್ ಮಾಡಬೇಕಾಗುತ್ತದೆ.
ಎಮ್ಮೆಯ ಕುರಿತು ಹಲವು ಕುತೂಹಲಕರ ಪ್ರಸಂಗಗಳನ್ನು ಬರೆದಿದ್ದಾರೆ ಚಂದ್ರಮತಿ ಸೋಂದಾ

Read More

“ದೋಸೆ”ಯ ವೈಭೋಗ…..

ಮಿಕ್ಸಿ ಇಲ್ಲದ ಕಾಲವಾದರೂ ವಾರದಲ್ಲಿ ನಾಲಕ್ಕೋ ಐದೋ ದಿನ ದೋಸೆಯೇ ಬೆಳಗಿನ ತಿಂಡಿಗೆ. ಅವಲಕ್ಕಿ, ಉಪ್ಪಿಟ್ಟು ಅಂದರೆ ಅದು ಸೋಮಾರಿಗಳ ತಿಂಡಿ ಎನ್ನುವ ಅಭಿಪ್ರಾಯವಿತ್ತು. ಒಮ್ಮೆ ಮನೆಯಲ್ಲಿ ಹೆಂಗಸರಿಲ್ಲದೆ, ಗಂಡಸು ತಿಂಡಿಮಾಡಿಕೊಳ್ಳುವ ಪ್ರಮೇಯ ಬಂದರೆ ಅಕ್ಕಪಕ್ಕದ ಮನೆಯ ಹೆಂಗಸರು `ಮನೇಲ್ಲಿ ಯಾರೂ ಹೆಂಗಸ್ರಿಲ್ಲೆ. ನಮ್ಮನೆಗೆ ತಿಂಡಿಗೆ ಬಾ, ದೋಸೆ ತಿನ್ನಲಕ್ಕು’ ಎಂದು ಕರೆಯುವುದಿತ್ತು.
ಚಂದ್ರಮತಿ ಸೋಂದಾ ಬರೆದ ದೋಸೆ ಕುರಿತ ಪ್ರಬಂಧ ನಿಮ್ಮ ಓದಿಗೆ

Read More

ಬೋನಿಗೆ ಬಂದನಾ ಇಲಿರಾಯನು

ನಮ್ಮೂರಿನಲ್ಲಿದ್ದಂತೆ ಈ ನಗರದಲ್ಲಿ ಗದ್ದೆ ಇದೆಯಾ? ಗೊಣಬೆ ಇದೆಯಾ? ಅಥವಾ ಭತ್ತದ ಕಣಜವೋ, ಅಕ್ಕಿ ಮೂಟೆಯೋ ಅವಕ್ಕೆ ಸಿಗುತ್ತಾ? ಅಂದ್ಮೇಲೆ ಯಾರಾದ್ರೂ ಚೂರುಪಾರು ತರಕಾರಿ ಬೆಳೆಯೋಣ ಅಂತ ಹೊರಟರೆ ಅದರಲ್ಲಿ ಬಿಡೋ ಕಾಯಿಗಳನ್ನುತಿನ್ನದೇ ಮತ್ತೇನು ಮಾಡಲು ಸಾಧ್ಯ. ಅಕ್ಕಿ ಭತ್ತ, ತರಕಾರಿ ಏನಾದರೂ ಸರಿ, ಹೊಟ್ಟೆಪಾಡು ನೋಡಿಕೊಳ್ಳಬೇಕು. ಆದರೂ ಈ ಸುಂಡಿಲಿಗಳು ಚಳ್ಳೇ ಹಣ್ಣು ತಿನ್ನಿಸುವುದರಲ್ಲಿ ಭಾರೀ ಹುಶಾರು.

Read More

ಚಂದ್ರಮತಿ ಸೋಂದಾ ಬರೆದ ಪ್ರಬಂಧ, ‘ಬಹುರೂಪಿ ಮಂಡಕ್ಕಿ’

“ಮನೆಗೆ ಯಾರಾದ್ರೂ ಬರುತ್ತಾರೆ ಎಂದಾಗ ಕಾಫಿ, ಟೀ ಜೊತೆಗೆ ಸಾಥ್ ನೀಡುವ ಮಂಡಕ್ಕಿ ಬಗ್ಗೆ ಮಹಿಳೆಯರಿಗೆ ಅಕ್ಕರೆ ಹೆಚ್ಚು. ಶೇಂಗಾ, ಹುರಿಗಡಲೆ, ಕೊಬ್ಬರಿ, ಬೆಳ್ಳುಳ್ಳಿ, ಮೆಣಸಿನಪುಡಿ ಎಲ್ಲವನ್ನೂ ಹಾಕಿ ಒಗ್ಗರಣೆ ಮಾಡಿ ಇಟ್ಟರೆ ನಾಲ್ಕಾರು ದಿನ ಚಹಾ ಅಥವಾ ಕಾಫಿ ಜೊತೆಗೆ ತಿನ್ನಬಹುದು. ಒಂದಿಷ್ಟು ಸ್ಟಾಕಿದ್ರೆ, ಬೇಕಾದಾಗ ಈರುಳ್ಳಿ ಹೆಚ್ಚಿ ಕ್ಯಾರೆಟ್ ತುರಿದು ಚುರುಮುರಿ ಮಾಡುವುದೇನು ಕಷ್ಟವಲ್ಲ….”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ