Advertisement

ಕೆಂಡಸಂಪಿಗೆ

ಉಪವಾಸ ವ್ರತದ ಅನುಭವಗಳು: ದರ್ಶನ್‌ ಜಯಣ್ಣ ಸರಣಿ

ನನ್ನ ಹೆಂಡತಿಯನ್ನು ತೋರಿಸಿ “ಆಕೆ ಕ್ಯಾರಿಯಿಂಗ್” ಅಂದೆ. ಆಕೆಯ ಮುಖ ಪೆಚ್ಚಾಯಿತು! ಅವಳ ಸೂಪರ್ವೈಸರ್‌ಗೆ ಫೋನಾಯಿಸಿ ಕೇಳಿದಳು. ಒಂದಷ್ಟು ಮಾತೂ ಕಥೆಯಾದಮೇಲೆ ಕೊಟ್ಟಳು. ನಾನು ಧನ್ಯವಾದ ಹೇಳಿ ಅದನ್ನು ಪಡೆದು ಕ್ಯಾಪ್ ತೆಗೆಯುವಾಗ “ಸರ್ ಮ್ಯಾಡಂ ಪ್ಲೀಸ್ ಅದನ್ನು ಇಲ್ಲಿ ಕುಡಿಯಬೇಡಿ” ಅಂದಳು. ನಾನು “ಇದು ಕ್ಯಾಂಟೀನ್, ಇಲ್ಲಿ ಬೇಡ ಎಂದರೆ ಹೊರಗೆ ಸಾಧ್ಯವೇ ಇಲ್ಲ” ಎಂದು ನನ್ನ ಅಸಹಾಯಕತೆ ತೋರಿದೆ. ಅದಕ್ಕವಳು ನನ್ನ ಹೆಂಡತಿಯನ್ನು ಕುರಿತು “ಮ್ಯಾಡಂ ನೀವು ಅದನ್ನು ನಿಮ್ಮ ವ್ಯಾನಿಟಿ ಬಾಗ್‌ನಲ್ಲಿ ಇಟ್ಟುಕೊಂಡು, ಟಾಯ್ಲೆಟ್‌ನ ಒಳಗೆ ಹೋಗಿ ಕುಡಿದು ಬನ್ನಿ ಪ್ಲೀಸ್!” ಅಂದಳು.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿಯ ಆರನೆಯ ಕಂತು

Read More

ಅಚ್ಚರಿಯ “ಅಭಯಾ” ತೊಟ್ಟ ಮನಸ್ಸು: ದರ್ಶನ್‌ ಜಯಣ್ಣ ಸರಣಿ

ಮನಸಿನಲ್ಲಿ ಯಾಕೋ ತಳಮಳ ಶುರುವಾಯಿತು. ಇವರಾರೋ ಫೋನ್ ನಂಬರ್ ಶೇರ್ ಮಾಡುತ್ತಿಲ್ಲ, ಐಡೆಂಟಿಟಿ ಶೇರ್ ಮಾಡುತ್ತಿಲ್ಲ, ಕೇವಲ ನನ್ನ ವಿವರ ಪಡೆದು, ಇಲ್ಲಿಗೆ ಕರೆಸಿಕೊಂಡಿದ್ದಾರೆ, ಈಗಲೂ ಕಾಯಿಸುತ್ತಿದ್ದಾರೆ ಎಂದುಕೊಳ್ಳುವಷ್ಟರಲ್ಲಿ ಯಾರೋ ಪುಸ್ತಕಗಳನ್ನು ಹೊತ್ತು ಬರುತ್ತಿರುವುದು ಕಾಣಿಸಿತು. “ಓಹ್, ಇವರೋ ಅಭಯಾ ತೊಟ್ಟ ಮಹಿಳೆ!” ತಮ್ಮ ಮುಖವೊಂದನ್ನ ಕಾಣುವಹಾಗೆ ಬಿಟ್ಟು ಇಡೀ ದೇಹಕ್ಕೆ ಅಭಯಾ ತೊಟ್ಟಿದ್ದಾರೆ. ಕಾರಿನಿಂದ ಹೊರಗಡೆ ಇಳಿದೆ. “ಬುಕ್ಸ್?” ಎಂದು ಕೇಳಿದರು. “ಎಸ್” ಎಂದೆ. ನಲವತ್ತು ರಿಯಾಲ್ ಕೊಡಲು ಹೇಳಿದರು, ಕೊಟ್ಟೆ. ಹಣಪಡೆದು ಪುಸ್ತಕಗಳನ್ನು ಕೊಟ್ಟು ಹೊರಟುಬಿಟ್ಟರು!
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿಯ ಐದನೆಯ ಕಂತು

Read More

ಸೌದಿಯ ಹೊಸ ಮೆಗಾ ಪ್ರಾಜೆಕ್ಟ್‌!: ದರ್ಶನ್‌ ಜಯಣ್ಣ ಸರಣಿ

ಆತ “ದುಬೈ ನಲ್ಲಿ ಏನಿದೆ? ಒಂದು ಐದಾರು ಶಾಪಿಂಗ್ ಮಾಲ್‌ಗಳು, ಎರಡು ಮುಖ್ಯ ರಸ್ತೆ, ಎರಡು ಹೋಟೆಲ್ಲು ಮತ್ತು ಬಹು ಮಹಡಿ ಕಟ್ಟಡ ಅಷ್ಟೇ ತಾನೇ?! ನಮ್ಮದು ಅದಕ್ಕಿಂತ ದೊಡ್ಡ ಯೋಜನೆ ಮತ್ತು ಹತ್ತು ಪಟ್ಟು ಹಿರಿದಾದದ್ದು” ಎಂದುಬಿಟ್ಟ. ಪ್ರಶ್ನೆ ಕೇಳುತ್ತಿದ್ದವರು ಕಕ್ಕಾ ಬಿಕ್ಕಿ. ಈ ಉತ್ತರ ಕೆಲವು egoistic ಸೌದಿಗಳಿಗೆ ಅಪ್ಯಾಯವಾಗಬಹುದು; ಆದರೆ ಒಂದು ವಿಷಯ ಗಮನದಲ್ಲಿಟ್ಟುಕೊಳ್ಳಬೇಕು. ದುಬೈ ನಗರ ಅಥವಾ ಯುಎಇ ದೇಶ ಈ ಎಲ್ಲವನ್ನೂ 50 ವರ್ಷ ಮುಂಚಿತವಾಗಿ ಮಾಡಿ ಗೆದ್ದಿದೆ. ಆಗಲೇ ಅವರ ದೃಷ್ಟಿಕೋನ ಹಾಗಿತ್ತು ಎಂಬುದನ್ನು ಯಾರೂ ಮರೆಯಬಾರದು.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿಯ ಐದನೆಯ ಬರಹ

Read More

ಸೌದಿ ದೇಶದ ಹಿನ್ನೆಲೆ…: ದರ್ಶನ್‌ ಜಯಣ್ಣ ಸರಣಿ

ಈ ದೇಶದ ಮೊದಲ ಹೆಸರು ನಜ್ದ್ ಮತ್ತು ಹೇಜಾಜ್ ಎಂದಾಗಿತ್ತು. ಹೆಜಾಜ್‌ನಲ್ಲಿಯೇ ಮೆಕ್ಕಾ- ಮದೀನಾ ಎಲ್ಲ ಇರುವುದು ಮತ್ತು ನಜ್ದ್ ಎಂದರೆ ಇಂದಿನ ಸೌದಿಯ ಮಧ್ಯ ಭಾಗವಾಗಿದೆ. ಅಬ್ದುಲ್ ಅಜೀಜ್(1875 – 1953) ಈ ಎರಡು ಭಾಗಗಳ ಜೊತೆಗೆ ತಂಪಾದ ಬೆಟ್ಟಗುಡ್ಡಗಳಿಂದ ಕೂಡಿರುವ ಯೆಮೆನ್‌ಗೆ ಹೊಂದಿಕೊಂಡಿರುವ ದಕ್ಷಿಣದ ನಜ್ರನ್, ಅಸಿರ್ ಮತ್ತು ಉತ್ತರದ ಅಂದರೆ ಸಿರಿಯಾ ಇರಾಕ್‌ನ ಕಡೆಯ ನಾರ್ದರ್ನ್ ಗಡಿಯನ್ನು ಹಾಗೆಯೇ ಇಂದಿನ ತೈಲದ ತೊಟ್ಟಿಲಾದ ಈಸ್ಟರ್ನ್ ಪ್ರಾವಿನ್ಸ್ ಅನ್ನು ನಂತರದ ವರ್ಷಗಳಲ್ಲಿ ದಂಗೆ ಹೊರಟು ಸೌದಿಗೆ ಸೇರಿಸಿಕೊಳ್ಳುತ್ತಾನೆ.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿಯ ನಾಲ್ಕನೆಯ ಬರಹ

Read More

“ಡೆಸರ್ಟ್ಸ್‌” ಮಾತ್ರ ಬೇಡಪ್ಪ….: ದರ್ಶನ್‌ ಜಯಣ್ಣ ಸರಣಿ

ಈ ಪ್ರಯಾಣದ ನಡುವೆಲ್ಲಾ ನನ್ನನ್ನು ಕಾಡಿದ ವಿಷಯ ಮಧ್ಯದಲ್ಲೆಲ್ಲೋ ಗಾಡಿ ಪಂಕ್ಚರ್ ಆದರೆ ಏನು ಮಾಡುವುದು? ಎಸಿ ಕೈಕೊಟ್ಟರೆ ಹೇಗೆ ಸಂಭಾಳಿಸುವುದು? ಮರಳ ಮಳೆ ಬಂದು ದಾರಿ ಕಾಣದಾದರೆ ಏನು ಗತಿ, ಇತ್ಯಾದಿ. ಹಾಗೇನೂ ಆಗದಿದ್ದರೂ ರಿಯಾದ್ ತಲುಪುವವರೆಗೂ ಮತ್ತು ಎರಡು ದಿನದ ನಂತರ ವಾಪಾಸು ಬರುವಾಗಲೂ ನನ್ನನ್ನು ಬಿಟ್ಟು ಬಿಡದೆ ಕಾಡಿದ ಪ್ರಶ್ನೆಗಳು ಇವು. ದಾರಿ ಅತ್ಯಂತ ಬ್ಯುಸಿಯಾಗಿದ್ದರೂ, ಅಲ್ಲಲ್ಲಿ ಹತ್ತಾರು ಕಿಲೋಮೀಟರ್‌ಗಳ ನಂತರವೇ ಪೆಟ್ರೋಲ್, ತಿಂಡಿ ತಿನಿಸು, ಪಂಕ್ಚರ್ ಅಂಗಡಿ ಮತ್ತು ಇನ್ನಿತರೆ ಅಂಗಡಿಗಳು ನಿಗದಿತ ಜಾಗದಲ್ಲಿ ಮಾತ್ರವೇ ಇರುವುದು ಪರಿಸ್ಥಿತಿಯನ್ನ ಇನ್ನಷ್ಟು ಬಿಗಡಾಯಿಸಿತ್ತು.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ