Advertisement

ಕೆಂಡಸಂಪಿಗೆ

ಸುಂದರ ಕಾಡಿನ ರೋ‌ಚಕ ಕಥೆಗಳು-೨: ರೂಪಾ ರವೀಂದ್ರ ಜೋಷಿ ಸರಣಿ

ಶಾಲೆಗೆ ಹೋಗುವಾಗ, ಹಲವೆಡೆ ನಾವು ಇಂಥ ನಯನ ಮನೋಹರ “ಹೂ ರಥ” ನೋಡುತ್ತ ಹೋಗುತ್ತಿದ್ದೆವು. ಈಗಲೂ ಆ ಸುಂದರ ದೃಶ್ಯ ನನ್ನ ಕಣ್ಣಿಗೆ ಕಟ್ಟಿದಂತಿದೆ. ಹಾಗೇ ಇನ್ನೊಂದು ಚಂದದ ಹೂ ಅಂದರೆ, ಚದುರಂಗಿ. ಇದು ತೀರಾ ಪುಟಾಣಿ ಹೂಗಳ ಗೊಂಚಲು. ನಕ್ಷತ್ರದ ಆಕಾರದ ಗಾಢ ಕೇಸರಿ, ಕೆಂಪು ಹೂಗಳ ಚದುರಂಗಿ ಪೊದೆಯಾಗಿ ಬೆಳೆಯುವ ಸಸ್ಯ. ಇದರ ಸಪೂರ ಕಾಂಡಕ್ಕೆ ಸೂಕ್ಷ್ಮ ಮುಳ್ಳುಗಳಿರುತ್ತವೆ. ಇದರ ಹೂ ನೋಡಲು ಬಹಳ ಚಂದ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಹನ್ನೊಂದನೆಯ ಕಂತು

Read More

ಸುಂದರ, ಸಮೃದ್ಧ ಕಾಡಿನ ರೋಚಕ ಕಥೆಗಳು: ರೂಪಾ ರವೀಂದ್ರ ಜೋಶಿ ಸರಣಿ

ತುಂಬ ದಟ್ಟವಾದ ಎತ್ತರವಾದ ಮರಗಳಿಂದ ಕಂಗೊಳಿಸುವ ಕಾಡಿನಿಂದ ಆವೃತವಾದ ಆ ಗುಡ್ಡ ನೋಡುವುದೆಂದರೆ ಎಲ್ಲಿಲ್ಲದ ಖುಶಿ ನನಗೆ. ಅದರಲ್ಲಿ ಒಂದು ವಿಚಿತ್ರ ಆಕರ್ಷಣೆ ಇತ್ತು. ಹಗಲು ಅಷ್ಟು ಪ್ರೀತಿಯಿಂದ ನೋಡುವ ಗುಡ್ಡ, ರಾತ್ರಿ ಮಾತ್ರ ಭಯ ಹುಟ್ಟಿಸುತ್ತಿತ್ತು. ರಾತ್ರಿ ಊಟ ಮಾಡಿ ಕೈತೊಳೆಯಲು, ‘ವಂದ’ ಮಾಡಲು ಹೊರಗೆ ಬಂದಾಗಲೆಲ್ಲ ನಾವು ಅತ್ತ ದೃಷ್ಟಿ ಹರಿಸುವ ಸಾಹಸವನ್ನೇ ಮಾಡುತ್ತಿರಲಿಲ್ಲ. ಆಕಸ್ಮಿಕವಾಗಿ ಕಣ್ಣು ಅತ್ತ ಹೋದರೆ ಸಾಕು, ಕಾರ್ಗತ್ತಲೆಯಲ್ಲಿ ಮಸಿ ಬಳಿದಷ್ಟು ಕರ್ರಗೆ ಬೃಹದಾಕಾರವಾಗಿ ಕುಳಿತ ಅದು, ಭಯಂಕರವಾದ ಕಲ್ಪನೆ ಮೂಡಿಸಿ, ಎದೆಯ ನಗಾರಿ ಬಡಿತ ಏರುತ್ತಿತ್ತು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಮಾಘಿಯ ಚಳಿಯಲ್ಲಿ, ಆಲೆಮನೆಯ ಘಮಲಲ್ಲಿ…: ರೂಪಾ ರವೀಂದ್ರ ಜೋಶಿ ಸರಣಿ

ಅಪ್ಪಯ್ಯ “ಯೇ ಹುಡುಗ್ರೇ ಏಳ್ರೇ. ಆಲೇಮನೀಗೆ ಹೋಗಿ ಹಾಲು ಕುಡೀರೇ.” ಎಂದು ಏಳಿಸುತ್ತಿದ್ದರು. ಹಸಿದ ಹೊಟ್ಟೆಗೆ ಕಬ್ಬಿನ ಹಾಲು ಕುಡಿದರೆ ಅದೆಲ್ಲ ರಕ್ತವೇ ಆಗಿಬಿಡುತ್ತದೆಯಂತೆ ಎಂದು ಅಪ್ಪಯ್ಯ ಯಾವಾಗಲೂ ಹೇಳುತ್ತಿದ್ದರು. ಅಪ್ಪಯ್ಯನ ದನಿಗೆ, ನಾವು ಹೊದಿಕೆ ಕಿತ್ತೊಗೆದು, ಮುಖ ತೊಳೆದ ಶಾಸ್ತ್ರಮಾಡಿ, ಆಲೆಮನೆಯತ್ತ ಓಡುತ್ತಿದ್ದೆವು. ಅಷ್ಟರಲ್ಲಿ ಅಪ್ಪಯ್ಯ ಒಳ್ಳೆಯ ಕಬ್ಬು ಹುಡುಕಿ, ಗಾಣಕ್ಕೆ ಕೊಡಿಸಿ, ನಮಗೆ ಕುಡಿಯಲು ಸವಿಯಾದ ಐಸ್ ಕೋಲ್ಡ್ ಹಾಲು ಹಿಡಿದು ಇಟ್ಟಿರುತ್ತಿದ್ದರು. ಮೊದಲೇ ಮಾಘ ಮಾಸದ ಛಳಿ. ಆ ಥಣ್ಣನೆಯ ಹಾಲು ಹೊಟ್ಟೆಗಿಳಿಯುತ್ತಿದ್ದಂತೆಯೇ, ದಂತ ಪಂಕ್ತಿಗಳು, ಮಸೆದುಕೊಳ್ಳುತ್ತ, ಕಟ ಕಟನೆ ಸಪ್ಪಳ ಮಾಡತೊಡಗುತ್ತಿದ್ದವು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಮಲೆನಾಡಿನ ಹಬ್ಬಗಳ ಸಂಭ್ರಮ: ರೂಪಾ ರವೀಂದ್ರ ಜೋಶಿ ಸರಣಿ

ಅಂಥ ಬಡತನದಲ್ಲೂ, ಅಪ್ಪಯ್ಯ ಉಮೇದಿಯಿಂದ, ಅದಕ್ಕೆ ಬೇಕಾಗುವ ವಿವಿಧ ಬಣ್ಣದ ಹಾಳೆ, ಝರಿ ಎಲ್ಲವನ್ನೂ ಕೊಂಡು ತರುತ್ತಿದ್ದರು. ಆಗೆಲ್ಲ ಈಗಿನಂತೆ ವಿದ್ಯುತ್ ಸೌಲಭ್ಯ ನಮ್ಮಲ್ಲಿ ಇರಲಿಲ್ಲ. ಆದರೂ ಅದೊಂದು ಬಗೆಯ ಬಣ್ಣದ ಹಾಳೆಗಳನ್ನು ಕಲಾತ್ಮಕವಾಗಿ ಕತ್ತರಿಸಿ ಅಂಟಿಸಿ, ಕೇವಲ ಎಣ್ಣೆಯ ದೀಪದಲ್ಲೂ ಆ ಮಂಟಪ ಝಗಮಗಿಸುವಂತೆ ಮಾಡುತ್ತಿದ್ದರು. ಕೈಲಿ ಹಿಡಿದರೆ, ಸಣ, ಸಣ ಎಂದು ಸದ್ದಾಗುವಂತಿದ್ದ ಆ ಬಣ್ಣದ ಕಾಗದವನ್ನು “ಸಂತ್ರ ತಗಡು” ಅಂತ ಕರೆಯುತ್ತಿದ್ದರು. ಅದನ್ನು ಕಲಾತ್ಮಕವಾಗಿ ಕತ್ತರಿಸಿ, ಗುಬ್ಬಿ ಮಾಡಿ, ಮಂಟಪದ ಕಂಬಕ್ಕೆ, ಅಕ್ಕ ಪಕ್ಕದ ಪಟ್ಟಿಗಳಿಗೆ ಅಂಟಿಸಿ, ಅದಕ್ಕೆ ಝರಿಯ ಪುಡಿಯನ್ನು ಅಂಟಿಸಿ, ನಮ್ಮಣ್ಣ ಅದ್ಭುತವಾದ ಝಗಮಗ ಮಂಟಪ ಮಾಡುತ್ತಿದ್ದ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಬಲ್ಲಿರೇನು ಕಾಡ ಹಣ್ಣುಗಳ ರುಚಿಯ?: ರೂಪಾ ರವೀಂದ್ರ ಜೋಶಿ ಸರಣಿ

ಎಳೆಯ ಕಾಯಿಗಳು ಬಲಿತು, ಕರ್ರಗೆ ಹೊಳೆಯುವ ಆ ಹಣ್ಣುಗಳು ಕಣ್ಣಿಗೆ ಬಿದ್ದರೆ ಮುಗಿಯಿತು. ಸ್ಪರ್ಧೆಗೆ ಬಿದ್ದವರಂತೇ, ನುಗ್ಗಿ ನುಗ್ಗಿ ಹಣ್ಣುಗಳನ್ನು ಕೊಯ್ದು ಚಪ್ಪರಿಸುತ್ತಿದ್ದೆವು. ಹುಳಿಯ ಜೊತೆಗೆ ಸವಿ ಬೆರೆತ ಆ ಮಧುರ ರುಚಿ ನೆನೆದರೆ, ಈಗಲೂ ಬಾಯಲ್ಲಿ ನೀರೂರುತ್ತದೆ. ಈ ಕವಳಿ ಕಾಯಿ ಕೊಯ್ದರೆ, ಹಾಲಿನಂಥ ಜಿಗುಟು ವಸರುತ್ತದೆ. ಈ ಜಿಗುಟಿನಿಂದ ನಮ್ಮ ಅಂಗಿಯೆಲ್ಲ ಕಲೆಯಾಗಿ, ಮನೆಯಲ್ಲಿ ನಿತ್ಯ ಬೈಗುಳದ ಹೂ ತಲೆಗೇರುತ್ತಿತ್ತು. ಆ ರುಚಿ ಹಣ್ಣಿನ ಮುಂದೆ, ಬೈಗುಳ, ಬಡಿತ ಇವೆಲ್ಲ ಯಾವ ಲೆಕ್ಕದ್ದು ಹೇಳಿ?
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಐದನೆಯ ಕಂತು

Read More
  • 1
  • 2

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ