Advertisement

ಕೆಂಡಸಂಪಿಗೆ

ಮಹಾದೇವಿಯಕ್ಕನೆಂಬ ಬೆಳಕು…: ಸುಭದ್ರಾ ಹೆಗಡೆ ಬರಹ

ಅಕ್ಕನ ವಚನಗಳನ್ನು ಉದಾರಿಸುತ್ತ, ಆ ಘಟನೆಗಳಿಗೆ ಪೂರಕವಾಗುವಂತೆ ಕತೆಗಳನ್ನು ಹೇಳುವುದು ಈ ಕೃತಿಯ ಮತ್ತೊಂದು ವಿಶೇಷತೆ. ರಾಜ ಮನೆತನದ ರೀತಿ-ರಿವಾಜುಗಳನ್ನು ಸ್ವತಂತ್ರ ಮನೋಭಾವದ ಅಕ್ಕನಿಗೆ ಸಹಿಸುವುದು ಸಹಜವಾಗಿಯೇ ಕಷ್ಟವಾಗಿ, ಆ ರಾಜ ವೈಭೋಗವನ್ನೆಲ್ಲ ಧಿಕ್ಕರಿಸಿ ಹೊರ ನಡೆಯುತ್ತಾಳೆ. ಅಲ್ಲಿಂದ ಅಕ್ಕನ ಅಪರಿಮಿತ ಹುಡುಕಾಟ ನಿರಂತರವಾಗಿ ಸಾಗುತ್ತದೆ. ಒಂಟಿ ಹೆಣ್ಣು ಅರೆವಸ್ತ್ರ ಧರಿಸಿ ನಡೆವ ದಾರಿಯಲ್ಲಿ ಬರುವ ಅನೇಕ ಸಂಕಷ್ಟಗಳನ್ನು ಮೆಟ್ಟಿ ನಿಲ್ಲುವ ಧೀರೋದ್ಧಾತ ಮನಸ್ಸುಳ್ಳ ಛಲಗಾತಿ ಅಕ್ಕನ ಮೇರು ವ್ಯಕ್ತಿತ್ವವನ್ನು ಅದ್ಭುತವಾಗಿ ಕೆತ್ತಿದ್ದಾರೆ ಲೇಖಕಿಯವರು. ಅಕ್ಕನ ವ್ಯಕ್ತಿತ್ವದ ಅನಾವರಣವಾದ ರೀತಿ ಅಸದೃಶ್ಯವಾಗಿದೆ.
ಡಾ. ಎಚ್.ಎಸ್. ಅನುಪಮಾ ಅವರ “ಬೆಳಗಿನೊಳಗು ಮಹಾದೇವಿಯಕ್ಕ” ಕಾದಂಬರಿಯ ಕುರಿತು ಸುಭದ್ರಾ ಹೆಗಡೆ ಬರಹ

Read More

ಕಾಳುಮೆಣಸಿನ ರಾಣಿ ಚೆನ್ನಭೈರಾದೇವಿಯ ಅಕಳಂಕ ಚರಿತ್ರೆ: ಸುಭದ್ರಾ ಹೆಗಡೆ ಬರಹ

ಕಾದಂಬರಿಯನ್ನು ಓದುತ್ತಾ ಹೋದಂತೆ ಶೌರ್ಯ, ಸಾಹಸಕ್ಕೆ ಹೆಸರಾಗಿ ನಿಂತ ವೀರವನಿತೆ ಜೀವ ತಳೆದು ನಮ್ಮೆದುರು ನಿಲ್ಲುವಂತೆ ರಾಣಿಯ ಪಾತ್ರವನ್ನು ಅಷ್ಟು ಸೂಕ್ಷ್ಮವಾಗಿ ಹೆಣೆಯಲಾಗಿದೆ. ಜೈನ ಧರ್ಮದವಳಾದ ರಾಣಿ ಸಾಳುವ ವಂಶದ ಕೊನೆಯ ಕುಡಿ, ಸರ್ವಧರ್ಮ ಸಮನ್ವಯವನ್ನು ಸಾರಿದವಳು. ಇಲ್ಲಿ ಬರುವ ಪ್ರತಿಯೊಂದು ಪಾತ್ರವೂ, ಗುರುಗಳಾದ ಭಟ್ಟಾಕಳಂಕರು, ಪ್ರಧಾನಿಯಾದ ಸಭಾಹಿತರು, ಶಬಲೆ, ಜಿನದತ್ತ, ಸತ್ಯಾಶ್ರಯ ಇವರೆಲ್ಲರೂ ಕಳೆದುಹೋದ ಸಮೃದ್ಧವಾದ ಸಾಮ್ರಾಜ್ಯವೊಂದರ ಸಾಕ್ಷಿಯಾಗಿ ನಿಲ್ಲುತ್ತಾರೆ. ರಾಣಿಗೆ ಬೆಂಗಾವಲಾಗಿ ನಿಂತು ನಾಡ ಪ್ರೇಮವನ್ನು ತೋರಿಸುತ್ತಾರೆ.
ಗಜಾನನ ಶರ್ಮಾ ಬರೆದಿರುವ ಐತಿಹಾಸಿಕ ಕಾದಂಬರಿ ‘ಚೆನ್ನಭೈರಾದೇವಿʼ ಕುರಿತು ಸುಭದ್ರಾ ಹೆಗಡೆ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ