Advertisement

ಕೆಂಡಸಂಪಿಗೆ

ಉಳಿದು ಹೋಗುವುದೆಂದರೆ… ವಿನಾಯಕ ಅರಳಸುರಳಿ ಅಂಕಣ

ಮುಂದಿನ ಕೆಲ ವರ್ಷಗಳ ಕಾಲ ಆ ಪತ್ರ ಹಾಗೆಯೇ ಇಲ್ಲದ ಅಜ್ಜನ ಹೆಸರನ್ನು ವಿಳಾಸವಾಗಿಸಿಕೊಂಡು ಬಂದು ನಮಗೆಲ್ಲ ಶುಭಾಶಯ ಹೇಳುತ್ತಿತ್ತು. ಕೊನೆಗೊಂದು ದಿನ ಯಾರಿಂದಲೋ ಗೊತ್ತಾದ ವಿಷಯವೇನೆಂದರೆ ಆ ಪತ್ರದ ಬುಡದಲ್ಲಿ ‘ಶುಭಕೋರುವವರು – ABC ಆಚಾರ್’ ಎಂದು ಬರೆದಿರುತ್ತಿದ್ದ, ಅಜ್ಜ ಹೇಳುತ್ತಿದ್ದ ಆಚಾರ್ ಇದ್ದರಲ್ಲ, ಅವರೂ ತೀರಿಹೋಗಿ ಕೆಲ ವರ್ಷಗಳೇ ಆಗಿದ್ದವು! ಅವರ ಮಗನೇ ಅವರ ಹೆಸರಿನಲ್ಲಿ ಈ ಶುಭಾಶಯ ಪತ್ರವನ್ನು ಗ್ರಾಹಕರಿಗೆ ಕಳಿಸುತ್ತಿದ್ದ! ಹೇಗೆ ಅವರ ದೃಷ್ಟಿಯಲ್ಲಿ ತೀರಿಹೋದ ಬಳಿಕವೂ ಅಜ್ಜ ಜೀವಂತವಾಗಿದ್ದನೋ ಹಾಗೇ ನಮ್ಮೆಲ್ಲರ ದೃಷ್ಟಿಯಲ್ಲಿ ಆಚಾರರೂ ಜೀವಂತವಾಗಿದ್ದರು!
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ವಿನಾಯಕ‌ ಅರಳಸುರಳಿ ಹೊಸ ಅಂಕಣ “ಆಕಾಶ ಕಿಟಕಿ” ಇಂದಿನಿಂದ ಶುರು

ಮೊದಲಿನಿಂದ ಖಾಲಿಯೇ ಇರುವ ಕುರ್ಚಿಗಿಂತ ನಡುವೆ ಒಂದಷ್ಟು ಹೊತ್ತು ಯಾರೋ ಕುಳಿತಿದ್ದು ಎದ್ದು ಹೋದ ಆಸನ ಹೆಚ್ಚು ಖಾಲಿಯಾಗಿ ಕಾಣುತ್ತದೆ. ನವ ಮಾಸ ತುಂಬಿದ ಬಳಿಕ ಜೀವದ ಬದಲಿಗೆ ಶೂನ್ಯವನ್ನು ಹಡೆದ ಒಡಲು ಹೊಸದಾದ ಖಾಲಿತನಕ್ಕೀಡಾಗುತ್ತದೆ. ಬಂದೇ ಬರುವನೆಂದು ನಂಬಿದ್ದ ಅತಿಥಿ.. ಬರಲೇ ಬೇಕಿದ್ದ ಅತಿಥಿ.. ಅವನ ಸ್ವಾಗತಕ್ಕೆ ಏನೆಲ್ಲ ತಯಾರಾಗಿತ್ತು! ತಂದಿಟ್ಟುಕೊಂಡ ಮಲ್ಲಿಗೆ ಮೆದುವಿನ ಟೊಪ್ಪಿಯಿತ್ತು. ಮೊಲದ ತುಪ್ಪಳದಂಥಾ ಅಂಗಿಯಿತ್ತು. ಅದರ ಅಂಚಲ್ಲಿ ಕೈಯಲ್ಲೇ ಹೊಲಿದ ಕಸೂತಿಯಿತ್ತು.
ವಿನಾಯಕ‌ ಅರಳಸುರಳಿ ಹೊಸ ಅಂಕಣ “ಆಕಾಶ ಕಿಟಕಿ” ಇಂದಿನಿಂದ, ಮಂಗಳವಾರಗಳಂದು, ಹದಿನೈದು ದಿಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟವಾಗಲಿದೆ

Read More

ತಮ್ಮ ಬೆಂಗಳೂರಿಗೆ ಬಂದ..: ವಿನಾಯಕ ಅರಳಸುರಳಿ ಲಲಿತ ಪ್ರಬಂಧ

ಕೊಂಚ ಸ್ಥಿತಿವಂತರಾಗಿದ್ದ ಪಕ್ಕದ ಮನೆಯ ಅಣ್ಣನ ಮಗನ ಬರ್ತಡೇ ಪಾರ್ಟಿಯಲ್ಲಿ ತಿನ್ನಲು ಸಿಕ್ಕ ಚಿಕ್ಕ ಕೇಕ್‌ನ ತುಣುಕನ್ನೇ ಸ್ವರ್ಗ ಲೋಕದ ತಿನಿಸೆಂಬಂತೆ ಅದೊಂದು ದಿನ ತಿಂದಿದ್ದೆವು. ಇನ್ನೊಂದು ಪೀಸ್ ಬೇಕು ಎಂಬ ಆಸೆಯನ್ನು ಬಾಯಲ್ಲೇ ಇಟ್ಟುಕೊಂಡು ಕೈ ತೊಳೆದಿದ್ದೆವು. ಯಾರೋ ತುಂಡೊಂದನ್ನು ಬೇಡವೆಂದು ತಟ್ಟೆಯಲ್ಲೇ ಬಿಟ್ಟಾಗ ಅದು ನಮಗೆ ಸಿಗುವುದೇನೋ ಎಂದು ಆಸೆಯಿಂದ ಕಾದಿದ್ದೆವು. ಇಂತಿಪ್ಪ ಅಪೂರ್ಣ ಬಯಕೆಗಳ ಬಾಲ್ಯವನ್ನೇ ಕಳೆದ ತಮ್ಮನಿಗೆ ಈಗಲೂ ಈ ಪಟ್ಟಣದ ವಿಶೇಷ ತಿಂಡಿಗಳ ಬಗ್ಗೆ ಆಸೆಯಿದ್ದರೆ ಅದರಲ್ಲಿ ಯಾವ ತಪ್ಪಾಗಲೀ, ಅತಿಯಾಸೆಯಾಗಲೀ ನನಗೆ ಕಾಣಲಿಲ್ಲ.
ವಿನಾಯಕ ಅರಳಸುರಳಿ ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ನಮ್ಮೂರ ಆಸ್ಪತ್ರೆಯ ನೆನಪುಗಳು

ನಾನೆಷ್ಟೇ ಬೇಡವೆಂದುಕೊಂಡರೂ ನಮ್ಮ ಶಾಲೆಯ ಕಡೆಯಿಂದ ಕನಿಷ್ಠ ವರ್ಷಕ್ಕೊಮ್ಮೆಯಾದರೂ ಆಸ್ಪತ್ರೆಗೆ ತಪಾಸಣೆಗೆ ಕರೆದೊಯ್ಯುತ್ತಿದ್ದರು. ಸಾಲದ್ದಕ್ಕೆ ಅದು ಬೇರೆ ಚುಚ್ಚುಮದ್ದುಗಳ ಕಾಲ! ಸರ್ಕಾರೀ ಶಾಲೆಯಾದ್ದರಿಂದ, ಸರ್ಕಾರದ್ದೇ ನಿರ್ದೇಶನದ ಮೇರೆಗೆ ಹೇಳದೇ ಕೇಳದೇ ನಮ್ಮನ್ನು ಇದ್ದಕ್ಕಿದ್ದಂತೆ ಆಸ್ಪತ್ರೆಗೆ ನಡೆಸಿಕೊಂಡುಹೋಗಿ ವೈದ್ಯರ ಕೋಣೆಯ ಹೊರಗೆ ಸಾಲಾಗಿ ನಿಲ್ಲಿಸಿಬಿಡುತ್ತಿದ್ದರು. ನನಗಂತೂ ಈ ಇಂಜಕ್ಷನ್ ಎಂದರೆ ಇನ್ನಿಲ್ಲದ ಭಯ. ಎಂದಿನಂತೆ ನಡೆಯುತ್ತಿದ್ದ ತರಗತಿಯ ಮಧ್ಯೆ ಇದ್ದಕ್ಕಿದ್ದಂತೆ ಒಳಪ್ರವೇಶಿಸಿದ ಮುಖ್ಯಶಿಕ್ಷಕರು ‘ಎಲ್ಲರೂ ಸಾಲಾಗಿ ಆಸ್ಪತ್ರೆಯ ಕಡೆ ನಡೆಯಿರಿ. ಯಾರೂ ಗಲಾಟೆ ಮಾಡಬಾರದು’ ಎಂದು ಉಗ್ರ ದನಿಯಲ್ಲಿ ಘೋಷಿಸಿಬಿಟ್ಟರು.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ