Advertisement

Category: ದಿನದ ಅಗ್ರ ಬರಹ

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಯತಿರಾಜ್ ವೀರಾಂಬುಧಿ ಕತೆ

‘ಈ ಮಹಾರಾಯನ ಕೊರೆತದಿಂದ, ನಾನು ಬೇರೆಯವರಿಗೆ ಎಷ್ಟು ಕೊರೆಯುತ್ತಿದ್ದೆ ಎಂಬ ಅರಿವಾಗಿದೆ. ಪಾಪ! ನನ್ನ ಸೊಸೆ ಚಿನ್ನದಂಥಾ ಹುಡುಗಿ. ಎಲ್ಲವನ್ನೂ ಸಹಿಸಿದ್ದಾಳೆ. ಈತನ ಕೊರೆತ ತಪ್ಪಿಸಿಕೊಳ್ಳಲು ಸೊಸೆಯನ್ನೇ ಮೊರೆ ಹೋಗಬೇಕು’ ಎಂದು ಮನದಲ್ಲೇ ನಿರ್ಧರಿಸಿದರು. ಮರುದಿನ ಬೆಳಿಗ್ಗೆ ನಂದಿನಿ ನಿತಿನ್‌ನನ್ನು ಶಾಲೆಗೆ ಒಯ್ಯಲು ಸಿದ್ಧಳಾದಾಗ ರಾಯರು ಅವಳಲ್ಲಿಗೆ ಬಂದರು. ಶಾಸ್ತ್ರಿಗಳು ಎಲ್ಲೂ ಕಾಣಿಸಲಿಲ್ಲ.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಯತಿರಾಜ್ ವೀರಾಂಬುಧಿ ಕತೆ “ಉಭಯ ಸಂಕಟ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಫ್ಲಾಪ್ ಆದ ಬಲೂನಿನ ಐಡಿಯಾ: ಬಸವನಗೌಡ ಹೆಬ್ಬಳಗೆರೆ ಸರಣಿ

ನನ್ನ ಐಡಿಯಾವನ್ನು ನನ್ನ ಗೆಳೆಯರು ಒಪ್ಪಿದರು. ಐಡಿಯಾವನ್ನು ಕಾರ್ಯಗತಗೊಳಿಸಲು ಅಣಿಯಾದೆವು. ಆದರೆ ನಾವೆಷ್ಟೇ ಪ್ರಯತ್ನಿಸಿದರೂ ಬಟ್ಟೆಯನ್ನು ಬಲೂನಿನೊಳಗೆ ತೂರಿಸಲು ಆಗಲಿಲ್ಲ! ಏನೇನೋ ಪ್ರಯತ್ನ ಪಟ್ಟು ಬಟ್ಟೆಯನ್ನು ಬಲೂನಿನೊಳಗೆ ಸೇರಿಸಿದೆವು. ಆದರೆ ಬಲೂನ್ ಒಡೆದ ಕೂಡಲೆ ಬಟ್ಟೆ ಮಡಿಚಿದ ಸ್ಥಿತಿಯಲ್ಲಿರುತ್ತಿತ್ತು! ಅಂದುಕೊಂಡಂತೆ ಅಕ್ಷರ ಕಾಣುತ್ತಲೇ ಇರಲಿಲ್ಲ! ಇದನ್ನು ಸರಿ ಮಾಡಲು ಬಹಳ ಪ್ರಯತ್ನಿಸುತ್ತಾ ಸಮಯ ಕಳೆದು ಹೋದದ್ದು ತಿಳಿಯಲೇ ಇಲ್ಲ. ಅದಾಗಲೇ ಬೆಳಗಿನ ಜಾವ ಮೂರಾಗಿತ್ತು!! ನಿದ್ದೆ ಮಂಪರು ಬೇರೆ, ನನ್ನ ಯೋಜನೆ ಕೈಗೊಡದಿದ್ದುದು ಬೇರೆ. ಯಾಕಾದ್ರೂ ಕಾರ್ಯದರ್ಶಿ ಆದೆನಪ್ಪಾ ಅನಿಸ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತಾರನೆಯ ಕಂತು ನಿಮ್ಮ ಓದಿಗೆ

Read More

ಬಲ್ಲಿರೇನು ಕಾಡ ಹಣ್ಣುಗಳ ರುಚಿಯ?: ರೂಪಾ ರವೀಂದ್ರ ಜೋಶಿ ಸರಣಿ

ಎಳೆಯ ಕಾಯಿಗಳು ಬಲಿತು, ಕರ್ರಗೆ ಹೊಳೆಯುವ ಆ ಹಣ್ಣುಗಳು ಕಣ್ಣಿಗೆ ಬಿದ್ದರೆ ಮುಗಿಯಿತು. ಸ್ಪರ್ಧೆಗೆ ಬಿದ್ದವರಂತೇ, ನುಗ್ಗಿ ನುಗ್ಗಿ ಹಣ್ಣುಗಳನ್ನು ಕೊಯ್ದು ಚಪ್ಪರಿಸುತ್ತಿದ್ದೆವು. ಹುಳಿಯ ಜೊತೆಗೆ ಸವಿ ಬೆರೆತ ಆ ಮಧುರ ರುಚಿ ನೆನೆದರೆ, ಈಗಲೂ ಬಾಯಲ್ಲಿ ನೀರೂರುತ್ತದೆ. ಈ ಕವಳಿ ಕಾಯಿ ಕೊಯ್ದರೆ, ಹಾಲಿನಂಥ ಜಿಗುಟು ವಸರುತ್ತದೆ. ಈ ಜಿಗುಟಿನಿಂದ ನಮ್ಮ ಅಂಗಿಯೆಲ್ಲ ಕಲೆಯಾಗಿ, ಮನೆಯಲ್ಲಿ ನಿತ್ಯ ಬೈಗುಳದ ಹೂ ತಲೆಗೇರುತ್ತಿತ್ತು. ಆ ರುಚಿ ಹಣ್ಣಿನ ಮುಂದೆ, ಬೈಗುಳ, ಬಡಿತ ಇವೆಲ್ಲ ಯಾವ ಲೆಕ್ಕದ್ದು ಹೇಳಿ?
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಐದನೆಯ ಕಂತು

Read More

ದುಡ್ಡು ಬರ್ಲಿ ಐಸಾ… ಇನ್ನೂ ಕೊಡಿ ಐಸಾ…!: ಎಚ್. ಗೋಪಾಲಕೃಷ್ಣ ಸರಣಿ

ಅದರ ಮಾರನೇ ದಿವಸ ಹೋಗಿ ಭರಮಪ್ಪನ ಎದುರು ನಿಂತೆ. ಒಂದು ಗಂಟೆ ಕಾದೆ. ನನ್ನ ಕಡೆ ತಿರುಗಿ ನೋಡಲು ಸಹ ಅವರಿಗೆ ಪುರುಸೊತ್ತು ಇಲ್ಲರ. ಐದನೇ ದಿವಸವೂ ಇದೇ ರಿಪೀಟ್ ಆಯ್ತು. ಆರನೇ ದಿವಸ ಭಾನುವಾರ. ತೆಪ್ಪಗೆ ಮನೇಲೆ ಇದ್ದು ನನ್ನ ಅದೃಷ್ಟಕ್ಕೆ ಗಂಟೆ ಗಂಟೆಗೂ ಕೋಲಿನಿಂದ ಬಾರಿಸುತ್ತಾ ಕಳೆದೆ. ಸೋಮವಾರ ಬೆಳಿಗ್ಗೆ ಮತ್ತೆ ಕೆಇಬಿ ಆಫೀಸಿಗೆ ದಂಡ ಯಾತ್ರೆ ಮಾಡಿದೆ. ಜಗನ್ನಾಥ, ಅದೇ ಲೈನ್ ಮ್ಯಾನ್ ದಾರೀಲಿ ಸಿಕ್ಕಿದ. ನನ್ನನ್ನು ನೋಡಿ ಅವನ ಲೂನಾ ನಿಲ್ಲಿಸಿದ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೈದನೆಯ ಕಂತು

Read More

ಬಾಗಿಲಿಗೆ ಬಂದ ಸ್ನೇಹಿತ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಹೊರಗೆ ಕುಳಿತಿದ್ದ ಸ್ವಾಮಿ, ಮಣಿ ಮತ್ತು ಕಾರ್‌ಅನ್ನು ರಸ್ತೆಯಲ್ಲಿ ಬರುವವರು ಹೋಗುವವರು ವಿಚಿತ್ರವಾಗಿ ನೋಡಿಕೊಂಡು ಹೋಗುತ್ತಿದ್ದರು. ಹತ್ತಿರದಲ್ಲಿ ನೀರಿನ ಟ್ಯಾಂಕ್ ಬರುವುದಕ್ಕೆ ಮುಂಚೆ ಮಹಿಳೆಯರು ಸರತಿಯಲ್ಲಿ ನಿಂತುಕೊಂಡು ಪ್ಲ್ಯಾಸ್ಟಿಕ್ ಬಿಂದಿಗೆಗಳೊಂದಿಗೆ ಜಗಳವಾಡುತ್ತಿದ್ದರು. ಸ್ವಾಮಿ, “ಮಣಿ ನಿನಗೆ ಎಷ್ಟು ಜನ ಮಕ್ಕಳು?” ಎಂದ. ಮಣಿ, “ಸ್ವಾಮಿ ಒಬ್ಬ ಮಗ, ಒಬ್ಬಳು ಮಗಳು. ಹುಡುಗ ಕಾಲೇಜ್ ಓದ್ತಾ ಇದ್ದಾಗಲೇ ಸತ್ತೋಗಿಬಿಟ್ಟ. ನಿನಗೆ ಸುಳ್ಳೇನು ಹೇಳುವುದು. ನನಗೆ ಗೊತ್ತಿಲ್ಲದೆ ಪೋಕರಿ ಹುಡುಗರ ಜೊತೆಗೆ ಸೇರಿಕೊಂಡು ಗಣಿಯಲ್ಲಿ ಕಳ್ಳತನ ಮಾಡುವುದಕ್ಕೋಗಿ ಅಪಘಾತದಲ್ಲಿ ಸತ್ತೋದ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಇಪ್ಪತ್ತೆಂಟನೆಯ ಕಂತು ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ