Advertisement

Category: ದಿನದ ಪುಸ್ತಕ

ನವೀನ ತಂತ್ರಜ್ಞಾನದ ಕುರಿತ ನವೀನ ಮಾದರಿ ಕತೆಗಳು: ಗುರುರಾಜ ಕುಲಕರ್ಣಿ ಕೃತಿಯ ಕುರಿತು ವಸುಮತಿ ಉಡುಪ ಮಾತುಗಳು

ಈ ಕಥಾಸಂಕಲನದ ಕತೆಗಳು ಸಿದ್ಧ ಮಾದರಿಯ ಕತೆಗಳಿಗಿಂತ ವಿಭಿನ್ನವಾಗಿ ಚಿತ್ರಿತಗೊಂಡಿವೆ. ನವೀನ ತಂತ್ರಜ್ಞಾನದ ಕುರಿತು ಹೆಚ್ಚಿನ ಅರಿವಿಲ್ಲದವರಿಗೂ ತಿಳಿಯುವಂತೆ ಸರಳ ಭಾಷೆಯಲ್ಲಿ, ಸರಾಗವಾಗಿ ಕತೆ ಹೇಳಿದ್ದಾರೆ ಕುಲಕರ್ಣಿ, ಕತೆಗಳ ವೈವಿಧ್ಯ, ಭಾಷೆಯನ್ನು ಸಮರ್ಥವಾಗಿ, ಸುಲಲಿತವಾಗಿ ಬಳಸಿಕೊಂಡ ರೀತಿ, ಕತೆ ಹೇಳುವಲ್ಲಿನ ಲವಲವಿಕೆಯ ಗುಣದಿಂದಾಗಿ ಈ ಸಂಕಲನ ಛಂದ ಪುಸ್ತಕ ಬಹುಮಾನಕ್ಕೆ ಆಯ್ಕೆಯಾಗಿದೆ. ಕನ್ನಡ ಸಾಹಿತ್ಯದ ಮಟ್ಟಿಗೆ ಅಪರೂಪ ಎನಿಸುವಂತಹ ಹಲವು ಕತೆಗಳು ಸಂಕಲನದಲ್ಲಿ ಗಮನ ಸೆಳೆಯುವಂತಿವೆ.
ಗುರುರಾಜ ಕುಲಕರ್ಣಿ ಕಥಾಸಂಕಲನ “ಹ್ಯಾಷ್‌ ಟ್ಯಾಗ್”ಗೆ ಛಂದ ಪುಸ್ತಕದ ಬಹುಮಾನ ಲಭಿಸಿದ್ದು, ಈ ಕೃತಿಯ ಕುರಿತು‌ ವಸುಮತಿ ಉಡುಪ ಮಾತುಗಳು ನಿಮ್ಮ ಓದಿಗೆ

Read More

‘ಗೌರ್ಮೆಂಟ್ ಬ್ರಾಹ್ಮಣ’ನೆಂಬ ಪುಸ್ತಕವೂ ಮತ್ತು ನಾನು ರೂಪುಗೊಂಡ ಬಗೆಯೂ’: ಪ್ರಶಾಂತ್‌ ಬೆಳತೂರು ಬರಹ

ಚೇಳಿನಿಂದಲೇ ಹುಟ್ಟಿದ ಚೇಳಿನಿಂದಲೇ ಸತ್ತ ಎನ್ನುವ ತನ್ನಜ್ಜಿಯ ಮಾತುಗಳೊಂದಿಗೆ ತನ್ನ ತಂದೆಯನ್ನು ನೆನಪಿಸಿಕೊಳ್ಳುವ, ಪಂದ್ರಾ ಆಗಸ್ಟ್‌ನ ಸ್ವಾತಂತ್ರ್ಯ ನಿಜಕ್ಕೂ ಎಂತಹ ಸ್ವಾತಂತ್ರ್ಯ? ಯಾವ ಬಗೆಯ ಸ್ವಾತಂತ್ರ್ಯ? ಒಂದೇ ಒಂದು ಕೊಡದ ನೀರನ್ನು ಬಾವಿಯಲ್ಲಿ ಮೊಗೆಯಲಾರದೆ ಹೋದ ಕೆಳಗೇರಿಯ ಜನ ಅಂದು ಮೊಗೆಮೊಗೆದು ಸೇದಿದರು, ಮತ್ತೆ ಬಾವಿಗೆ ಸುರವಿದರು, ಮರುದಿನ ಆ ಬಾವಿಗಳಲ್ಲಿ ಇನ್ನಾರು ನೀರು ಮೊಗೆಯಬಾರದಂತೆ ಊರ ಜನರೇ ಶಾಶ್ವತವಾಗಿ ಮುಚ್ಚಿದ್ದರು ಎನ್ನುವಾಗ ಕರುಳು ಹಿಂಡಿದಂತಾಗುತ್ತದೆ.
ಪ್ರೊ. ಅರವಿಂದ ಮಾಲಗತ್ತಿ ಆತ್ಮಕತೆ “ಗೌರ್ಮೆಂಟ್ ಬ್ರಾಹ್ಮಣ”, ಹೇಗೆ ತಮ್ಮ ಬದುಕು ಬದಲಾಯಿಸಿತು ಎನ್ನುವುದರ ಕುರಿತು ಪ್ರಶಾಂತ್‌ ಬೆಳತೂರು ಬರಹ ಇಲ್ಲಿದೆ

Read More

ಬಾವಿಯೊಳಗೆ `ಪುಣ್ಯಕೋಟಿ’: ನಟರಾಜ್‌ ಅರಳಸುರಳಿ ಕೃತಿಯ ಬರಹ

ತಂಡೋಪತಂಡವಾಗಿ ಜನ ನಮ್ಮ ಮನೆಕಡೆ ಬರುತ್ತಿರುವುದು ಕಾಣಿಸಿತು. ಹಲವಾರು ಬ್ಯಾಟರಿ ಬೆಳಕುಗಳೂ ಒಂದೆರಡು ಪೆಟ್ರೋಮ್ಯಾಕ್ಸ್‌ಗಳೂ ಆ ಗುಂಪಿನಲ್ಲಿದ್ದವು. ಎಲ್ಲರೂ ಮನೆಯಂಗಳಕ್ಕೆ ಬಂದವರೇ ನೇರವಾಗಿ ಬಾವಿಯಕಡೆ ನಡೆದರು. ನೋಡನೋಡುತ್ತಿದ್ದಂತೆ ಮೂರ್ನಾಲ್ಕು ಜನ ಬಾವಿ ಇಳಿದರು. ಕೆಲವರು ಮೇಲಿನಿಂದ ನೇಣು ಇಳಿಬಿಟ್ಟರು. ದನಗಳ ಹೊಟ್ಟೆ ಕೆಳಗೆ ನೇಣು ತೂರಿಸಿ ಬಾವಿಯ ಇನ್ನೊಂದು ಭಾಗದಲ್ಲಿದ್ದವರಿಗೆ ತಲುಪಿಸಿದರು. ನೋಡ ನೋಡುತ್ತಿದ್ದಂತೆಯೇ ಒಂದೊಂದೇ ದನಗಳನ್ನು ಬಾವಿಯಿಂದ ಮೇಲೆತ್ತಿದರು.
ನಟರಾಜ್‌ ಅರಳಸುರಳಿ ಬರೆದ ತಮ್ಮ ತಂದೆಯವರ ಕುರಿತ ಬರಹಗಳ ಸಂಕಲನ “ಆಕಾಶಬುಟ್ಟಿ” ಕೃತಿಯ ಒಂದು ಬರಹ ನಿಮ್ಮ ಓದಿಗೆ.

Read More

ಮುಕ್ತ ಹಾಜರಿ: ಮುಕುಂದ ಜೋಷಿ: ಜಯಂತ ಕಾಯ್ಕಿಣಿ ಕೃತಿಯ ಬರಹ

ಅವರ ಆ ಪುಸ್ತಕಕ್ಕೆ ಅವರ ಹಕ್ಕೊತ್ತಾಯದ ಮೇಲೆ ನಾನು ಬ್ಲರ್ಬ್ ಬರೆದಿದ್ದೆ. ಈ ಬಗ್ಗೆ ನಮ್ಮ ನಡುವೆ ಒಂದು ಜೋಕ್ ಇತ್ತು. ಏನೆಂದರೆ ಆ ಪುಸ್ತಕ ಮುದ್ರಣ ಶುರುವಾಗುವ ಹಂತದಲ್ಲಿದೆ ಎಂದು ತಿಳಿದು ಅಜಿತ್ ಪಂಜಾಬ್‌ನಲ್ಲಿ ಸೇರಿ ನಾವು ಬೀರೋಚಿತವಾಗಿ ಸಿಲೆಬ್ರೇಟ್ ಮಾಡುವಾಗ, ಅವರು ಚೂರು ತೊದಲುತ್ತ, “ಈ ಪುಸ್ತಕ ಯಾವಾಗರೆ ಬರ್ಲಿ, ಅದಕ್ಕೆ ಬಲ್ಬ್ ಮಾತ್ರ ನೀವೇ ಬರೀಬೇಕ್ರಿ’’ – ಎಂದರು. ಅಂದಿನಿಂದ ಬ್ಲರ್ಬ್ ಪದಕ್ಕೆ ಪರ್ಯಾಯವೆಂಬಂತೆ ನಾವು ಬಲ್ಬ್ ಎಂದೇ ಬಳಸುತ್ತಿದ್ದೆವು. ಎಷ್ಟು ಕ್ಯಾಂಡಲಿಂದು ಇತ್ಯಾದಿ ವಿವರಗಳೊಂದಿಗೆ. ಯಾವುದಾದರೂ ಹೊಸ ಪುಸ್ತಕದ ಹಿನ್ನುಡಿಯಲ್ಲಿ ಹುರುಳಿಲ್ಲದಿದ್ದರೆ, ‘‘ಝೀರೋ ಕ್ಯಾಂಡಲ್ ಬಲ್ಬ್ರೀ” ಅಂತಿದ್ರು.
ಜಯಂತ ಕಾಯ್ಕಿಣಿ ಕೃತಿ “ತಾರಿ ದಂಡೆ”ಯ ಮತ್ತೊಂದು ಬರಹ ನಿಮ್ಮ ಓದಿಗೆ

Read More

‘ಮಾವಿನ ತುಮಕಿʼ: ಮಾಮಾ ಶಾಂತಾ: ಜಯಂತ ಕಾಯ್ಕಿಣಿ ಕೃತಿಯ ಬರಹ

ಯಾವುದೇ ಬಸ್ಸು ಹಿಡಿಯಲು ಸರಿಯಾದ ಸಮಯಕ್ಕೆ ಅಥವಾ ಚೂರು ಮುಂಚಿತವಾಗಿ ಆಕೆ ಹೋಗಿದ್ದೇ ಇಲ್ಲ. ಬಸ್ಸು ಹೊರಡುವ ಟೈಮಿಗೆ ಆಕೆ ಮಹಾರಾಣಿಯಂತೆ ನಿಧಾನಕ್ಕೆ ಮನೆಯಿಂದ ಹೊರಡುತ್ತಿದ್ದಳು. ಮತ್ತು ಮನೆಯಲ್ಲಿದ್ದ ನನ್ನನ್ನೋ ರಾಜೇಂದ್ರನನ್ನೋ ರಮಾನಂದನನ್ನೋ “ಹೋಗು ಬಸ್ ನಿಲ್ಲಿಸು” ಎಂದು ಬಸ್ ಸ್ಟ್ಯಾಂಡಿಗೆ ಅಟ್ಟುತ್ತಿದ್ದಳು. ನಾವ್ಯಾರೂ ಇರದಿದ್ದರೆ ಹಾದಿಯಲ್ಲಿ ಸಿಗುವ ಯಾವುದಾದರೂ ಸೈಕಲ್ ಸವಾರರನ್ನು ಓಡಿಸುತ್ತಿದ್ದಳು. ಸಣ್ಣ ಊರಿನ ಬಸ್‌ಸ್ಟ್ಯಾಂಡ್ ಕಂಟ್ರೋಲರ್ ಎಲ್ಲರಿಗೂ ಪರಿಚಿತರಾಗಿದ್ದರಿಂದ ಒಮ್ಮೊಮ್ಮೆ ನಿಲ್ಲಿಸುತ್ತಿದ್ದರು. ಕೆಲವೊಮ್ಮೆ ಬಸ್ಸು ಹೋಗಿಬಿಟ್ಟಿರುತ್ತಿದ್ದವು. ಆಗ ಎಲ್ಲರೂ ಬೈಸಿಕೊಳ್ಳುತ್ತಿದ್ದೆವು.
ಜಯಂತ ಕಾಯ್ಕಿಣಿ ಕೃತಿ “ತಾರಿ ದಂಡೆ”ಯ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ