Advertisement

Category: ದಿನದ ಪುಸ್ತಕ

ಅವ್ವಕ್ಕನೆಂಬ ಅಚ್ಚರಿ…: ಜ.ನಾ. ತೇಜಶ್ರೀ ಹೊಸ ಕಾದಂಬರಿಯ ಪುಟಗಳು

ಈಗ ಅವಳ ದೇಹ ಮೊದಲಿಗಿಂತ ಗಟ್ಟಿಯಾಗಿತ್ತು, ಸಲಾಕೆಯಂತೆ. ಮೇಲಿನ ಕೆಲಸಕ್ಕೆ ಕೆಲಸದವರಿದ್ದರೂ ಅವಳು ಮಾಮೂಲಿನಂತೆ ಎಲ್ಲ ಕೆಲಸ ಮಾಡುತ್ತಿದ್ದಳು. ಕೆಲಸ ಮಾಡಿದಷ್ಟೂ ಅವಳಲ್ಲಿ ಕಸುವು, ತಾಳಿಕೊಂಡಷ್ಟೂ ಸುಂದರವಾಗಿ ಕಾಣುವುದನ್ನು ದೊಡ್ಡಯ್ಯ ವಿಸ್ಮಯದಲ್ಲಿ ನೋಡುತ್ತಿದ್ದ. ಮಂಜುನಾಥ ಮೂರು ತಿಂಗಳಿಗೆ ಮಗುಚಿದ, ಆಮೇಲೆ ಅಂಬೆಗಾಲಿಟ್ಟ. ಷಣ್ಮುಖ ಬೆಳೆದಿದ್ದನ್ನು ಹತ್ತಿರದಿಂದ ಗಮನಿಸದ ದೊಡ್ಡಯ್ಯನಿಗೆ ಮಂಜುನಾಥನನ್ನು ನೋಡುವಾಗ ಎಲ್ಲ ಹೊಸದೆನಿಸುತ್ತಿತ್ತು. ತಾನೂ ಮಗುವಾಗಿದ್ದಾಗ ಹೀಗೇ ಮಾಡಿದೆನ ಅಂತ ಯೋಚಿಸುತ್ತಿದ್ದ.
ಜ.ನಾ. ತೇಜಶ್ರೀ ಹೊಸ ಕಾದಂಬರಿ “ಜೀವರತಿ” ಕೃತಿಯ ಪುಟಗಳು ನಿಮ್ಮ ಓದಿಗೆ

Read More

ವೈಜ್ಞಾನಿಕ ಕೌತುಕದ ಬೆರಗನ್ನು ಎಚ್ಚರಿಸುವ “ವಿಲಕ್ಷಣ ಜಲಜಾಲ”: ನಾರಾಯಣ ಯಾಜಿ

ನೀರೆನ್ನುವ ಅಪೂರ್ವ ವಸ್ತು ಈ ಪ್ರಕೃತಿಯಲ್ಲಿ ಸೃಷ್ಟಿಯ ಕಾಲದಿಂದಲೂ ಇದೆ. ಮುಂದೆಯೂ ಇರಲಿದೆ. ಆದರೆ ಅದರಗುಣಮಟ್ಟವನ್ನು ಕಾಪಾಡಿ ಬದುಕುವುದು ಮತ್ತು ಭುವಿಯ ಮೇಲಿನ ಜೀವ ಸಂಕುಲನವನ್ನು ಡೈನೋಸಾರಸ್‌ಗಳಂತೆ ನಾಶವಾಗಿ ಹೋಗದಂತೆ ಮಾಡುವಲ್ಲಿ ಮಾನವರ ಪಾತ್ರದ ಕುರಿತು ಅವರು ಈ ಕೃತಿಯ ಮೂಲಕ ಗಮನ ಸೆಳೆಯುತ್ತಾರೆ. ಕೃತಿಯೊಂದು ಜನರನ್ನು ತಲುಪಲು ಭಾಷೆ ಮತ್ತು ಶೈಲಿ ಬಲು ಮುಖ್ಯ. ಈ ಎರಡರಲ್ಲಿಯೂ ಸಾಗರ್ ಅವರದು ಎತ್ತಿದ ಕೈ.
ಡಾ. ಡಿ. ಎಂ. ಸಾಗರ್ ಬರೆದ “ವಿಲಕ್ಷಣ ಜಲಜಾಲ” ಕೃತಿಯ ಕುರಿತು ನಾರಾಯಣ ಯಾಜಿ ಬರಹ ನಿಮ್ಮ ಓದಿಗೆ

Read More

ಅನುಭವಗಳನ್ನು ಮರಳಿ ಬಾಳಿಸುವ ಕಥೆಗಳು: ಎಡೆಯೂರು ಪಲ್ಲವಿ ಕಥೆಗಳಿಗೆ ವಿನಯಾ ಒಕ್ಕುಂದ ಮುನ್ನುಡಿ

ನಾಗರಿಕ ಸೌಜನ್ಯಕ್ಕಾಗಿ ಬಲು ಬೆಲೆ ತೆರಬೇಕಾದ ಆಧುನಿಕ ಬದುಕಿನ ಪಂಚಾಂಗ ಇಲ್ಲಿದೆ. ಹಾಗಿದ್ದರೆ, ಆಧುನಿಕತೆಯು ಹಳೆಯ ವರ್ಗೀಕೃತ ತಪ್ಪುಗಳನ್ನು ಮೀರಿಸಿಕೊಂಡಿದೆಯೇ? ಸಾಮಾಜಿಕ ಸಾಂಕ್ರಾಮಿಕಗಳಾಗಿದ್ದ ಜಾತಿ, ಧರ್ಮ, ವರ್ಗ, ಲಿಂಗಗಳೀಗ ಇಲ್ಲವಾಗಿವೆಯೇ? ಖಂಡಿತ ಇಲ್ಲ. ಈಗಲೂ ಈ ಎಲ್ಲ ತರತಮಗಳು ಹಾಗೆಯೇ ಮುನ್ನಡೆಯುತ್ತಿವೆ. ರೂಪಾಂತರಗೊಂಡು ವಿವರಣೆಗೆ ನಿಲುಕದಷ್ಟು ಸಂಕೀರ್ಣ ಸ್ಥಿತಿಯನ್ನು ಪಡೆದಿವೆ. ಪ್ರೀತಿಯ ರಾಜಕಾರಣದಿಂದ ಮತ್ತೆ ಬಲವರ್ಧನೆಗೊಳ್ಳುತ್ತಿವೆ. ಯಾಜಮಾನ್ಯವು ಯಾಜಮಾನ್ಯವೇ ಆಗಿ ಮುನ್ನಡೆಯುತ್ತಿದೆ.
ಎಡೆಯೂರು ಪಲ್ಲವಿ ಕಥಾ ಸಂಕಲನ “ಕುಂಡದ ಬೇರು” ಕೃತಿಗೆ ವಿನಯಾ ಒಕ್ಕುಂದ ಮುನ್ನುಡಿ

Read More

ದೇಸೀಧ್ವನಿಯ ಕಥೆಗಳು: ಪ್ರಕಾಶ್‌ ಪುಟ್ಟಪ್ಪ ಕಥಾಸಂಕಲನಕ್ಕೆ ಡಾ. ಮಹೇಶ್ವರಿ ಯು. ಮುನ್ನುಡಿ

ಕತೆಗಾರಿಕೆಯ ಕೌಶಲವನ್ನು, ಕತೆಗಾರನ ಆಳವಾದ ಸಂವೇದನಾಶೀಲತೆಯನ್ನು, ಸಮಾಜಮುಖಿಯಾದ ನೈಜ ಕಾಳಜಿಯನ್ನು ಹೊಂದಿರುವ ಗಟ್ಟಿಯಾದ ಕಥಾವಸ್ತುವುಳ್ಳ ಇನ್ನಷ್ಟು ಕತೆಗಳು ಸಂಕಲನದ ಮಹತ್ವವನ್ನು ಹೆಚ್ಚಿಸಿವೆ. ಪ್ರಕಾಶ ಅವರು ನೆಲಮೂಲದ ಸಂಸ್ಕೃತಿಯ ಸತ್ವದಿಂದ ವಿಶೇಷವಾಗಿ ಪುಷ್ಟಿಗೊಂಡವರು. ಆ ಘಮಲನ್ನೂ ಕ್ರೂರ ವಾಸ್ತವವನ್ನೂ ಜೊತೆಜೊತೆಯಾಗಿ ಕಟ್ಟಿಕೊಡುವ ‘ಕಂಡಾಯದೊಡೆಯ ಉಘೇಉಘೇ, ಐರನ್ ಆನೆಗಳು, ನಿಗಿನಿಗಿಕೆಂಡ ಮುಂತಾದ ಕತೆಗಳಲ್ಲದೆ ಭಿನ್ನಮಾದರಿಯ ಕತೆಗಳೂ ಈ ಸಂಗ್ರಹದಲ್ಲಿವೆ.. ಸಂಕಲನದ ಅತ್ಯುತ್ತಮ ಕತೆಗಳಲ್ಲಿ ಆ ಸತ್ವವೇ ಮೈದುಂಬಿದೆ.
ಪ್ರಕಾಶ್‌ ಪುಟ್ಟಪ್ಪ ಕಥಾಸಂಕಲನ ‘ಗಾಂಧಿಜೋಡಿನ ಮಳಿಗೆ’ಗೆ ಡಾ. ಮಹೇಶ್ವರಿ ಯು. ಮುನ್ನುಡಿ

Read More

ಲೋಕಾಂತ ಕವಿಯ ಏಕಾಂತ ಬದುಕಿನ ಅನಾವರಣ: ಡಾ. ಎ. ರಘುರಾಂ ಬರಹ

ಲೆಕ್ಕದಲ್ಲಿ ತಾನು ಅಷ್ಟೊಂದು ಪಂಡಿತನಲ್ಲ ಎನ್ನುವ ಕಾರಣಕ್ಕೆ ತಿಂಗಳಿಗೆ ಮೂವತ್ತೈದು ರೂಪಾಯಿ ಸಂಬಳದ ಪವರ್‌ಹೌಸ್‌ನ ನೌಕರಿಯನ್ನು ಬಿಟ್ಟು ಇಪ್ಪತ್ತೊಂದು ರೂಪಾಯಿಯ ಶಿಕ್ಷಕ ವೃತ್ತಿಯನ್ನು ಆಯ್ಕೆಮಾಡಿಕೊಳ್ಳುತ್ತಾರೆ. ಲೆಕ್ಕ ಬರದೇ ಇರುವ ಕಾರಣದಿಂದ ಈ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆಯೇ ಹೊರತು ಶಿಕ್ಷಕ ವೃತ್ತಿಯ ಕಾರಣದಿಂದಲ್ಲ. ಒಮ್ಮೆ ಮಗಳು ‘ಗಣಿತ ಕಲಿಸುವುದನ್ನು ಹೇಗೆ ನಿಭಾಯಿಸಿದೆ? ಗಣಿತ ನಿನಗೆ ಬರುವುದೇ ಇಲ್ಲವಲ್ಲ’ ಎಂದು ಕೇಳಿದ್ದಕ್ಕೆ ‘ವಿದ್ಯಾರ್ಥಿಗಳಿಗೆ ನಾನು, ನೀವು ಇಬ್ಬರೂ ಕೂಡಿಯೇ ಗಣಿತವನ್ನು ಬಗೆಹರಿಸಿಕೊಳ್ಳೋಣ..’ ಎಂದು ಹೇಳಿದೆ ಎಂದು ಗಹಗಹಿಸಿ ನಕ್ಕನು.
ತಮ್ಮ ತಂದೆ ಶಾಂತರಸರೊಂದಿಗಿನ ಒಡನಾಟದ ಕುರಿತು ಎಚ್.ಎಸ್.‌ ಮುಕ್ತಾಯಕ್ಕ ಬರೆದ “ಅಪ್ಪ ನಾನು ಕಂಡಂತೆ” ಕೃತಿಯ ಕುರಿತು ಡಾ. ಎ. ರಘುರಾಂ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ