Advertisement

Category: ದಿನದ ಅಗ್ರ ಬರಹ

ವಾತ್ಸಲ್ಯ ಬಿಡದಿರು ನಿನ್ನ ನಂಬಿದೆ ದೇವ…: ತೇಜಸ್ವಿನಿ ಹೆಗಡೆ ಬರಹ

ಮಾತಿನ ನಡುವೆ ವಿಮಲಕ್ಕ ಅಜ್ಜಿಯ ಬಳಿ “ಸರಸು, ಮಕ್ಕನೂ ಅವ್ರಿದ್ದೇ ಪ್ರಪಂಚದಲ್ಲಿ ಮುಳ್ಗಿದ್ದೋ. ಯಾರಿಗೂ ನಾನು ಬೇಡಾಗೋಯ್ದೆ ಅನ್ನಿಸ್ತು. ಬೇರೆಯವ್ಕೆ ನಾ ಇಷ್ಟ ಇದ್ನೋ ಇಲ್ಯೋ ಗೊತ್ತಿಲ್ಯೆ. ನಾ ಮೊದ್ಲಿಂದ್ಲೂ ಆ ದೇವ್ರಿಗೆ ಮಾತ್ರ ಪ್ರೀತಿ. ಅವಂಗೆ ನನ್ನ ಮೇಲೆ ರಾಶಿ ಮುತವರ್ಜಿ ಕಾಣ್ತು. ಅದ್ಕೇ ಯನ್ನ ಕಷ್ಟಕ್ಕೆ ಕೊನೆನೇ ಇಲ್ಲೆ ನೋಡು… ಇದೇ ನನ್ನ ಭಾಗ್ಯ ಅಂದ್ಕತ್ತಿ ಬಿಡು… ಎಲ್ಲ ನನ್ನ ಹಣೆಬಹರ, ಕರ್ಮ” ಎಂದು ಕಣ್ಣೀರಾಗಿದ್ದಳು. ನನಗೆ ಆಗ ಅರ್ಥವೇ ಆಗಿರಲಿಲ್ಲ. ಆದರೆ ಆ ಮಾತು ಮಾತ್ರ ಅದು ಹೇಗೋ ನನ್ನೊಳಗೆ ಇಳಿದು ಬಿಟ್ಟಿತ್ತು.
ತೇಜಸ್ವಿನಿ ಹೆಗಡೆ ಬರಹ ನಿಮ್ಮ ಓದಿಗೆ

Read More

ಚಿತ್ರಾ ವೆಂಕಟರಾಜು ಹೊಸ ಸರಣಿ “ಚಿತ್ತು-ಕಾಟು” ಇಂದಿನಿಂದ

ಇದರೊಳಗೆ ಒಂದು ತಮಾಷೆಯೆಂದರೆ ಪಾತ್ರದ ಜತೆಗೆ ನಟನೂ ಇರುತ್ತಾನೆ. ಪರಸ್ಪರ ಒಬ್ಬರಿಗೊಬ್ಬರನ್ನು ಕಂಡರೆ ಆಗದ ನಟರು ರಂಗದ ಮೇಲೆ ಪ್ರೇಮಿಸುತ್ತಾರೆ‌. ಪ್ರೀತಿಸಿದ ಹುಡುಗಿ ಅಜ್ಜಿಯೋ, ಸನ್ಯಾಸಿಯೋ ಆಗಿಬಿಟ್ಟಿರುತ್ತಾಳೆ. ಪ್ರೀತಿಸಿದ ನಟ ಇನ್ನೊಬ್ಬಳೊಂದಿಗೆ ಡಾನ್ಸ್ ಮಾಡ್ತಿರೋದನ್ನ ಅವನ ಪ್ರೇಯಸಿ ಸೈಡ್ ವಿಂಗಿನಲ್ಲಿ ಕೂತು.. ‘ಇದು ನಾಟಕ ಇದು ನಾಟಕ’ ಅಂತ ತನ್ನನ್ನೇ ಸಮಾಧಾನಪಡಿಸಿಕೊಳ್ಳುತ್ತಾಳೆ. ಹೀಗೆ ರಂಗದ ಮೇಲೆ ನಡೆಯುವ ನಾಟಕಕ್ಕಿಂತ ಹೆಚ್ಚು ರೋಚಕವಾದ ಅನೇಕ ನಾಟಕಗಳು ಈ ಪ್ರಕ್ರಿಯೆಯಲ್ಲಿ ನಡೆಯುತ್ತಲೇ ಇರುತ್ತದೆ. ಕಲಾಲೋಕದ ಕುರಿತು ಚಿತ್ರಾ ವೆಂಕಟರಾಜು ಹೊಸ ಸರಣಿ “ಚಿತ್ತು-ಕಾಟು” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಯತಿರಾಜ್ ವೀರಾಂಬುಧಿ ಕತೆ

‘ಈ ಮಹಾರಾಯನ ಕೊರೆತದಿಂದ, ನಾನು ಬೇರೆಯವರಿಗೆ ಎಷ್ಟು ಕೊರೆಯುತ್ತಿದ್ದೆ ಎಂಬ ಅರಿವಾಗಿದೆ. ಪಾಪ! ನನ್ನ ಸೊಸೆ ಚಿನ್ನದಂಥಾ ಹುಡುಗಿ. ಎಲ್ಲವನ್ನೂ ಸಹಿಸಿದ್ದಾಳೆ. ಈತನ ಕೊರೆತ ತಪ್ಪಿಸಿಕೊಳ್ಳಲು ಸೊಸೆಯನ್ನೇ ಮೊರೆ ಹೋಗಬೇಕು’ ಎಂದು ಮನದಲ್ಲೇ ನಿರ್ಧರಿಸಿದರು. ಮರುದಿನ ಬೆಳಿಗ್ಗೆ ನಂದಿನಿ ನಿತಿನ್‌ನನ್ನು ಶಾಲೆಗೆ ಒಯ್ಯಲು ಸಿದ್ಧಳಾದಾಗ ರಾಯರು ಅವಳಲ್ಲಿಗೆ ಬಂದರು. ಶಾಸ್ತ್ರಿಗಳು ಎಲ್ಲೂ ಕಾಣಿಸಲಿಲ್ಲ.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಯತಿರಾಜ್ ವೀರಾಂಬುಧಿ ಕತೆ “ಉಭಯ ಸಂಕಟ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಫ್ಲಾಪ್ ಆದ ಬಲೂನಿನ ಐಡಿಯಾ: ಬಸವನಗೌಡ ಹೆಬ್ಬಳಗೆರೆ ಸರಣಿ

ನನ್ನ ಐಡಿಯಾವನ್ನು ನನ್ನ ಗೆಳೆಯರು ಒಪ್ಪಿದರು. ಐಡಿಯಾವನ್ನು ಕಾರ್ಯಗತಗೊಳಿಸಲು ಅಣಿಯಾದೆವು. ಆದರೆ ನಾವೆಷ್ಟೇ ಪ್ರಯತ್ನಿಸಿದರೂ ಬಟ್ಟೆಯನ್ನು ಬಲೂನಿನೊಳಗೆ ತೂರಿಸಲು ಆಗಲಿಲ್ಲ! ಏನೇನೋ ಪ್ರಯತ್ನ ಪಟ್ಟು ಬಟ್ಟೆಯನ್ನು ಬಲೂನಿನೊಳಗೆ ಸೇರಿಸಿದೆವು. ಆದರೆ ಬಲೂನ್ ಒಡೆದ ಕೂಡಲೆ ಬಟ್ಟೆ ಮಡಿಚಿದ ಸ್ಥಿತಿಯಲ್ಲಿರುತ್ತಿತ್ತು! ಅಂದುಕೊಂಡಂತೆ ಅಕ್ಷರ ಕಾಣುತ್ತಲೇ ಇರಲಿಲ್ಲ! ಇದನ್ನು ಸರಿ ಮಾಡಲು ಬಹಳ ಪ್ರಯತ್ನಿಸುತ್ತಾ ಸಮಯ ಕಳೆದು ಹೋದದ್ದು ತಿಳಿಯಲೇ ಇಲ್ಲ. ಅದಾಗಲೇ ಬೆಳಗಿನ ಜಾವ ಮೂರಾಗಿತ್ತು!! ನಿದ್ದೆ ಮಂಪರು ಬೇರೆ, ನನ್ನ ಯೋಜನೆ ಕೈಗೊಡದಿದ್ದುದು ಬೇರೆ. ಯಾಕಾದ್ರೂ ಕಾರ್ಯದರ್ಶಿ ಆದೆನಪ್ಪಾ ಅನಿಸ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತಾರನೆಯ ಕಂತು ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ