Advertisement

Category: ಸಾಹಿತ್ಯ

ಫೋಟೋದಲ್ಲಿ ಬಂಧಿಯಾದ ಸೆಲ್ವಂ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಶಿಲಾಸ್ಫೋಟವಾದಾಗ ಬಹುಶಃ ನೀರಿನ ಮಟ್ಟ ಒಮ್ಮೆಲೆ ಮೇಲಕ್ಕೆ ಬಂದು ಮತ್ತೆ ಕೆಳಕ್ಕೆ ಹೋದಾಗ ಮೂವರೂ ಕಳ್ಳರನ್ನು ನೀರಿನ ಅಲೆಗಳು ಸುರಂಗಗಳಲ್ಲಿ ಎಲ್ಲೋ ಆಳಕ್ಕೆ ಎಳೆದುಕೊಂಡು ಹೋಗಿರಬೇಕು. ಆಗ ಅವರ ದೇಹಗಳು ಎಲ್ಲೋ ಆಳದ ಸುರಂಗಗಳಲ್ಲಿ ಇಲ್ಲ ಸ್ಟೋಪ್‌ಗಳಲ್ಲಿ ಶಿಲೆಗಳ ಮಧ್ಯೆ ಸಿಕ್ಕಿಕೊಂಡಿರಬೇಕು ಎಂದು ಊಹಿಸಲಾಯಿತು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಇಪ್ಪತ್ತಾರನೆಯ ಕಂತು ನಿಮ್ಮ ಓದಿಗೆ

Read More

ಡಾ. ಚಂದ್ರಮತಿ ಸೋಂದಾ ಬರೆದ ಈ ಭಾನುವಾರದ ಕತೆ

ಯಾಕೋ ಅವರ ಮನೆಯ ಕೆಲವು ಆಗುಹೋಗುಗಳಿಗೆ ನಾನು ಸಾಕ್ಷಿಯಾಗಿರುವಂತೆ ನನಗೆ ಅನಿಸಿದ್ದು ಸುಳ್ಳಲ್ಲ. ಮೊನ್ನೆಯ ಭೇಟಿಯ ನಂತರದಲ್ಲಿ ಯಾಕೋ ಗಂಗತ್ತೆ ಬಹಳವಾಗಿ ನೆನಪಾಗುತ್ತಿದ್ದಾರೆ. ಅಷ್ಟು ವರ್ಷ ಮನೆಯಿಂದ ದೂರವಿದ್ದ ಅವರಿಗೆ ಕೊನೆಗಾಲಕ್ಕೆ ಮತ್ತೆ ಆ ಮನೆಗೆ ಬರಬೇಕು ಅನಿಸಿದ್ದು ಯಾಕೆ? ಮನೆಯವರು ಒಪ್ಪದಿರುವುದರಿಂದ ಅವರಿಗೆ ಆ ಮನೆಗೆ ಬರುವ ಅವಕಾಶ ದೊರಕಿರಲಿಲ್ಲ. ಆದರೆ ಅವರ ಸಾವು ರಾಮಣ್ಣನನ್ನು ವಿಚಲಿತಗೊಳಿಸಿತೇ? ಸಾವಿನ ಸುದ್ದಿ ತಿಳಿದಿದ್ದೆ ರಾಮಣ್ಣ ಜಾನಕ್ಕ ಅಲ್ಲಿಗೆ ಧಾವಿಸಿದ್ದರಂತೆ.
ಡಾ. ಚಂದ್ರಮತಿ ಸೋಂದಾ ಬರೆದ ಈ ಭಾನುವಾರದ ಕತೆ “ಕಣ್ಣಾಚೆಯ ನೋಟ” ನಿಮ್ಮ ಓದಿಗೆ

Read More

ಚಿನ್ನ ಬಂತೂ… ಪ್ರಾಣ ಹೋಯ್ತೂ..!: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಇದನ್ನು ಕೇಳಿದ ಆಟೋದವನಿಗೆ ಇನ್ನೂ ಗಾಬರಿಯಾಯಿತು. ಯಾಕೆಂದರೆ ನಿನ್ನೆ ರಾತ್ರಿ ಮೂವರು ಚಿನ್ನದ ಅದಿರನ್ನು ಕಳ್ಳತನ ಮಾಡಲು ಇಳಿದುಕೊಂಡ ಹಳೆ ಗಣಿಗಳಿರುವುದು ಮಾರಿಕುಪ್ಪಮ್ ಮತ್ತು ಬಿಸಾನತ್ತಮ್ ಮಧ್ಯೆ ಇರುವ ಪ್ರದೇಶದಲ್ಲಿ. ಆಟೋದವನು ತನ್ನ ಮೂವರೂ ಗೆಳೆಯರಿಗೆ ಯಾವುದೇ ಅಪಾಯ ಆಗಬಾರದು ಎಂಬುದಾಗಿ ಮತ್ತೆಮತ್ತೆ ಉದ್ದಂಡಮ್ಮಾಳ್ ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ಹಿರಿಯ ಕವಿ ಎಚ್‌. ಎಸ್. ವೆಂಕಟೇಶಮೂರ್ತಿ ನಿಧನ

ಕನ್ನಡದ ಹಿರಿಯ ಕವಿ ಎಚ್‌. ಎಸ್. ವೆಂಕಟೇಶಮೂರ್ತಿ ಇಂದು ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಸುಮಾರು ಆರು ದಶಕಗಳಿಂದ ಸಾಹಿತ್ಯ ಕೃಷಿಯಲ್ಲಿ ತೊಡಗಿಕೊಂಡಿದ್ದ ಅವರು ಕಾವ್ಯ, ನಾಟಕ, ಮಕ್ಕಳ ಸಾಹಿತ್ಯ, ವಿಮರ್ಶಾ ರಂಗದಲ್ಲೂ ತಮ್ಮ ಸಾಹಿತ್ಯ ಕಾರ್ಯವನ್ನು ವಿಸ್ತರಿಸಿಕೊಂಡಿದ್ದರು. ಭಾವಗೀತೆಗಳೆಂದರೆ ಎಚ್.ಎಸ್.ವಿ. ಎನ್ನುವಷ್ಟು ಜನಪ್ರಿಯತೆಯನ್ನು ಹೊಂದಿ, ಭಾವಕವಿಯೆಂದೇ ಪ್ರಸಿದ್ಧರಾಗಿದ್ದರು.

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ತೇಜಸ್ವಿನಿ ಹೆಗಡೆ ಕತೆ

ಗಂಡನಿಂದ ಒದಗಿರುವ ವಿಪತ್ತನ್ನು ತಿಳಿದ ಪಾರ್ವತಮ್ಮ, ಚಿಂತೆಯಲ್ಲಿ ತಮ್ಮ ಆಪ್ತರೊಂದಿಗೆ ಗುಟ್ಟನ್ನು ರಟ್ಟಾಗಿಸಿದ್ದು ದೊಡ್ಡ ಪ್ರಮಾದವಾಗಿ ಬಿಟ್ಟಿತ್ತು. ಅದು ಹೇಗೋ ಈ ಕಳುವಿನ ವಿಷಯ ಬೀಗರ ಕಿವಿಗೂ ಬಿದ್ದು, ಸ್ಫೋಟವಾಗಿ, ಹುಡುಗನ ಹೆತ್ತವರು ಈಗ ಮದುವೆಗೆ ನಿರಾಕರಿಸತೊಡಗಿದ್ದರು. ರಾಮಭಟ್ಟರು ಇನ್ನಿಲ್ಲದಂತೇ ಬೇಡಿಕೊಳ್ಳುತ್ತಿದ್ದರೂ, ಕೊನೆಗೆ ನೆಂಟರಿಷ್ಟರು ದಬಾಯಿಸಿದರೂ, ಹಠದಿಂದ ಒಪ್ಪದ ಬೀಗರು, ವಾಗ್ದಾನ ಶಾಸ್ತ್ರಕ್ಕಾಗಿ ಅಲ್ಲೇ ಕುಳಿತಿದ್ದ ಹುಡುಗಿಯ ಕಡೆ ಕಣ್ಣೆತ್ತಿಯೂ ನೋಡದೇ ಹೊರ ನಡೆದುಬಿಟ್ಟರು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ತೇಜಸ್ವಿನಿ ಹೆಗಡೆ ಬರೆದ ಕತೆ “ಮರಕತ”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ